ರಾಜ್ಯ

ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಎಂ.ಬಿ.ಪಾಟೀಲ್‌ ಶಿಫಾರಸ್ಸು

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್‌ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ.ಪಾಟೀಲ್‌ ಅವರು ಶಿಫಾರಸ್ಸು ಮಾಡಿದ್ದು, ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್‌ ನಿಲ್ದಾಣಕ್ಕೆ ಚನ್ನಬಸವ ಪಟ್ಟದೇವರು ಹಾಗೂ ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪತ್ರದಲ್ಲಿ ಪ್ರಸ್ತಾಪ ಮಾಡಿದ್ದಾರೆ.

ಇದನ್ನು ಓದಿ: ಮೋದಿ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ರೈಲು : ಕೇಂದ್ರ ಸಚಿವ ಎಚ್‌ಡಿಕೆ

ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ.

ಈ ನಾಲ್ಕು ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಈ ಶಿಫಾರಸನ್ನು ಅಂಗೀಕರಿಸಿ ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ಪ್ರಕಟಿಸಿ ಎಂದು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

11 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

11 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

12 hours ago