ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ.ಪಾಟೀಲ್ ಅವರು ಶಿಫಾರಸ್ಸು ಮಾಡಿದ್ದು, ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದೇವರು ಹಾಗೂ ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪತ್ರದಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಇದನ್ನು ಓದಿ: ಮೋದಿ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ರೈಲು : ಕೇಂದ್ರ ಸಚಿವ ಎಚ್ಡಿಕೆ
ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ.
ಈ ನಾಲ್ಕು ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಈ ಶಿಫಾರಸನ್ನು ಅಂಗೀಕರಿಸಿ ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ಪ್ರಕಟಿಸಿ ಎಂದು ಕೋರಿದ್ದಾರೆ.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…