ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ ಈ ಕುರಿತು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ದರ ಪರಿಷ್ಕರಣೆ ತೀರ್ಮಾನವನ್ನು ಕೈಬಿಟ್ಟಿದೆ.
ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರದಿಂದ ಬಿಎಂಆರ್ಸಿಎಲ್ ಎಂ.ಡಿಗೆ ಮೇಲ್ ಮೂಲಕ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದಿದೆ ಎಂದು ಬಿಎಂಆರ್ಸಿಎಲ್ ಎಂ.ಡಿ. ರವಿ ಶಂಕರ್ ಸ್ಪಷ್ಟನೆ ನೀಡಿದ್ದಾರೆ.
ತಾತ್ಕಾಲಿಕ ಸ್ಥಗಿತ ಎಂದ ನಮ್ಮ ಮೆಟ್ರೋ
ದರ ಏರಿಕೆ ಕೈ ಬಿಟ್ಟ ವಿಚಾರವಾಗಿ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಫೆ.5 ರಂದು ಬಿಎಂಆರ್ಸಿಎಲ್ ನೀಡಿದ್ದ ಮಾಧ್ಯಮ ಪ್ರಕಟಣೆಯಲ್ಲಿ ಫೆ.9ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಪರಿಷ್ಕ ತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು. ಬಿಎಂಆರ್ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಕಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…