ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ.
ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ ಮೆಟ್ರೋ ಸುತ್ತಮುತ್ತ ಹಾಗೂ ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದೆ.
ನಮ್ಮ ಮೆಟ್ರೋ ನಿಲ್ದಾಣದ ಆವರಣದಲ್ಲಿ, ಕಚೇರಿಯ ಸುತ್ತಮುತ್ತ ನಿಂತ ನೀರು , ಹಸಿ ಕಸ , ಸೊಳ್ಳೆ ಮೊಟ್ಟೆ ಶೇಖರಣೆ ಆಗುವಂತ ಪ್ರದೇಶಗಳಿದ್ದರೆ ಅವುಗಳನ್ನ ಸ್ವಚ್ಚಗೊಳಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ನಿಲ್ದಾಣದಲ್ಲಿ ದಿನಕ್ಕೆ ಎರಡು ಬಾರಿ ಔಷಧಿ ಸಂಪಡಿಸುವುದನ್ನ ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಮೆಟ್ರೋ ಸಿಬ್ಬಂದಿಗಳು ಕೂಡ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ. ಇದರ ಜತೆಗೆ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನು BMRCL ಕಡ್ಡಾಯಗೊಳಿಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…