ರಾಜ್ಯ

ಕಲಿಯುಗದ ಅಂತ್ಯ ಹೇಳಲಿದೆ ಕಲ್ಲಿನ ನಂದಿ: ಅದು ಇರೋದಾದ್ರು ಎಲ್ಲಿ ಗೊತ್ತಾ.?

ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ.

90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ ಹಾಕುವಷ್ಟು ಜಾಗವಿತ್ತಂತೆ. ಆದ್ರೆ ಈಗ ಪರಿಸ್ಥಿತಿ ಹಾಗಿಲ್ಲ. ಈಗ ಆ ನಂದಿ ವಿಗ್ರಹ ಸುತ್ತಲಿನ ನಾಲ್ಕು ಕಂಬಗಳಿಗೆ ಅಂಟಿಕೊಂಡಿದೆ. ಹೀಗಾಗಿ ಜನರು ಈಗ ನಂದಿ ವಿಗ್ರಹವನ್ನು ಪ್ರದಕ್ಷಿಣೆ ಹಾಕಲು ಸಾಧ್ಯವಿಲ್ಲ.

ಭಾರತೀಯ ಪುರಾತತ್ವ ಇಲಾಖೆ ಈ ಬಗ್ಗೆ ಮಾಡಿರುವ ಸಂಶೋಧನೆಯಿಂದ ಈ ಕಲ್ಲಿನ ವಿಗ್ರಹ ಬೆಳೆಯುತ್ತಿದೆ ಎಂದು ದೃಢೀಕರಿಸಿದೆ. ಒಮ್ಮೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಕಲಿಯುಗ ಅಂತ್ಯವಾಗುತ್ತದೆ ಎಂದು ಪೋತನೂರು ವೀರಬ್ರಹ್ಮೇಂದ್ರರು ತಮ್ಮ ಕಾಲಜ್ಞಾನದಲ್ಲಿ ಹೇಳಿದ್ದಾರೆ. ಈ ಕಲ್ಲು 20 ವರ್ಷಕ್ಕೆ ಒಂದು ಇಂಚಿನಷ್ಟು ಬೆಳೆಯುತ್ತಿದೆ ಎಂದು ದಾಖಲೆ ಸಮೇತ ಪ್ರೂವ್‌ ಆಗಿದೆ. ಒಮ್ಮೆ ಜನರು ಹೇಳುತ್ತಿರುವಂತೆ, ಕಾಲಜ್ಞಾನದಲ್ಲಿ ಉಲ್ಲೇಖವಾಗಿರುವಂತೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಏನು ಗತಿ ಎಂದು ಕೆಲವರು ಚಿಂತಾಕ್ರಾಂತರಾಗಿದ್ದಾರೆ ಎನ್ನಲಾಗಿದೆ.

ಯಾಗಂಟಿ ಸ್ಥಳೀಯ ಜನರು ಈ ದೇವಸ್ಥಾನಕ್ಕೆ ಬಂದಾಗ ಈ ನಂದಿ ವಿಗ್ರಹವನ್ನು ತಪ್ಪದೇ ಸ್ವತಃ ತಮ್ಮ ಕಣ್ಣಿಂದು ನೋಡುತ್ತಾರೆ ಎನ್ನಲಾಗಿದೆ. ಕಾರಣ ಮೊದಲು ತಾವು ನೋಡಬೇಕು ಎನ್ನುವುದು ಒಂದು ಸಂಗತಿಯಾದರೆ, ಮೊದಲು ತಿಳಿದುಕೊಂಡರೆ ಕೆಲವು ಸಂಗತಿಗಳನ್ನು ಬೇರೆಯವರಿಗಿಂತ ಮೊದಲು ನಾವೇ ಅರಿತುಕೊಳ್ಳಬಹುದು ಎಂಬುದು ಇನ್ನೊಂದು ಸಂಗತಿಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

7 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

8 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

9 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

9 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

9 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

10 hours ago