ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ.
90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ ಹಾಕುವಷ್ಟು ಜಾಗವಿತ್ತಂತೆ. ಆದ್ರೆ ಈಗ ಪರಿಸ್ಥಿತಿ ಹಾಗಿಲ್ಲ. ಈಗ ಆ ನಂದಿ ವಿಗ್ರಹ ಸುತ್ತಲಿನ ನಾಲ್ಕು ಕಂಬಗಳಿಗೆ ಅಂಟಿಕೊಂಡಿದೆ. ಹೀಗಾಗಿ ಜನರು ಈಗ ನಂದಿ ವಿಗ್ರಹವನ್ನು ಪ್ರದಕ್ಷಿಣೆ ಹಾಕಲು ಸಾಧ್ಯವಿಲ್ಲ.
ಭಾರತೀಯ ಪುರಾತತ್ವ ಇಲಾಖೆ ಈ ಬಗ್ಗೆ ಮಾಡಿರುವ ಸಂಶೋಧನೆಯಿಂದ ಈ ಕಲ್ಲಿನ ವಿಗ್ರಹ ಬೆಳೆಯುತ್ತಿದೆ ಎಂದು ದೃಢೀಕರಿಸಿದೆ. ಒಮ್ಮೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಕಲಿಯುಗ ಅಂತ್ಯವಾಗುತ್ತದೆ ಎಂದು ಪೋತನೂರು ವೀರಬ್ರಹ್ಮೇಂದ್ರರು ತಮ್ಮ ಕಾಲಜ್ಞಾನದಲ್ಲಿ ಹೇಳಿದ್ದಾರೆ. ಈ ಕಲ್ಲು 20 ವರ್ಷಕ್ಕೆ ಒಂದು ಇಂಚಿನಷ್ಟು ಬೆಳೆಯುತ್ತಿದೆ ಎಂದು ದಾಖಲೆ ಸಮೇತ ಪ್ರೂವ್ ಆಗಿದೆ. ಒಮ್ಮೆ ಜನರು ಹೇಳುತ್ತಿರುವಂತೆ, ಕಾಲಜ್ಞಾನದಲ್ಲಿ ಉಲ್ಲೇಖವಾಗಿರುವಂತೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಏನು ಗತಿ ಎಂದು ಕೆಲವರು ಚಿಂತಾಕ್ರಾಂತರಾಗಿದ್ದಾರೆ ಎನ್ನಲಾಗಿದೆ.
ಯಾಗಂಟಿ ಸ್ಥಳೀಯ ಜನರು ಈ ದೇವಸ್ಥಾನಕ್ಕೆ ಬಂದಾಗ ಈ ನಂದಿ ವಿಗ್ರಹವನ್ನು ತಪ್ಪದೇ ಸ್ವತಃ ತಮ್ಮ ಕಣ್ಣಿಂದು ನೋಡುತ್ತಾರೆ ಎನ್ನಲಾಗಿದೆ. ಕಾರಣ ಮೊದಲು ತಾವು ನೋಡಬೇಕು ಎನ್ನುವುದು ಒಂದು ಸಂಗತಿಯಾದರೆ, ಮೊದಲು ತಿಳಿದುಕೊಂಡರೆ ಕೆಲವು ಸಂಗತಿಗಳನ್ನು ಬೇರೆಯವರಿಗಿಂತ ಮೊದಲು ನಾವೇ ಅರಿತುಕೊಳ್ಳಬಹುದು ಎಂಬುದು ಇನ್ನೊಂದು ಸಂಗತಿಯಾಗಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…