ರಾಜ್ಯ

ಕಲಿಯುಗದ ಅಂತ್ಯ ಹೇಳಲಿದೆ ಕಲ್ಲಿನ ನಂದಿ: ಅದು ಇರೋದಾದ್ರು ಎಲ್ಲಿ ಗೊತ್ತಾ.?

ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ.

90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ ಹಾಕುವಷ್ಟು ಜಾಗವಿತ್ತಂತೆ. ಆದ್ರೆ ಈಗ ಪರಿಸ್ಥಿತಿ ಹಾಗಿಲ್ಲ. ಈಗ ಆ ನಂದಿ ವಿಗ್ರಹ ಸುತ್ತಲಿನ ನಾಲ್ಕು ಕಂಬಗಳಿಗೆ ಅಂಟಿಕೊಂಡಿದೆ. ಹೀಗಾಗಿ ಜನರು ಈಗ ನಂದಿ ವಿಗ್ರಹವನ್ನು ಪ್ರದಕ್ಷಿಣೆ ಹಾಕಲು ಸಾಧ್ಯವಿಲ್ಲ.

ಭಾರತೀಯ ಪುರಾತತ್ವ ಇಲಾಖೆ ಈ ಬಗ್ಗೆ ಮಾಡಿರುವ ಸಂಶೋಧನೆಯಿಂದ ಈ ಕಲ್ಲಿನ ವಿಗ್ರಹ ಬೆಳೆಯುತ್ತಿದೆ ಎಂದು ದೃಢೀಕರಿಸಿದೆ. ಒಮ್ಮೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಕಲಿಯುಗ ಅಂತ್ಯವಾಗುತ್ತದೆ ಎಂದು ಪೋತನೂರು ವೀರಬ್ರಹ್ಮೇಂದ್ರರು ತಮ್ಮ ಕಾಲಜ್ಞಾನದಲ್ಲಿ ಹೇಳಿದ್ದಾರೆ. ಈ ಕಲ್ಲು 20 ವರ್ಷಕ್ಕೆ ಒಂದು ಇಂಚಿನಷ್ಟು ಬೆಳೆಯುತ್ತಿದೆ ಎಂದು ದಾಖಲೆ ಸಮೇತ ಪ್ರೂವ್‌ ಆಗಿದೆ. ಒಮ್ಮೆ ಜನರು ಹೇಳುತ್ತಿರುವಂತೆ, ಕಾಲಜ್ಞಾನದಲ್ಲಿ ಉಲ್ಲೇಖವಾಗಿರುವಂತೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಏನು ಗತಿ ಎಂದು ಕೆಲವರು ಚಿಂತಾಕ್ರಾಂತರಾಗಿದ್ದಾರೆ ಎನ್ನಲಾಗಿದೆ.

ಯಾಗಂಟಿ ಸ್ಥಳೀಯ ಜನರು ಈ ದೇವಸ್ಥಾನಕ್ಕೆ ಬಂದಾಗ ಈ ನಂದಿ ವಿಗ್ರಹವನ್ನು ತಪ್ಪದೇ ಸ್ವತಃ ತಮ್ಮ ಕಣ್ಣಿಂದು ನೋಡುತ್ತಾರೆ ಎನ್ನಲಾಗಿದೆ. ಕಾರಣ ಮೊದಲು ತಾವು ನೋಡಬೇಕು ಎನ್ನುವುದು ಒಂದು ಸಂಗತಿಯಾದರೆ, ಮೊದಲು ತಿಳಿದುಕೊಂಡರೆ ಕೆಲವು ಸಂಗತಿಗಳನ್ನು ಬೇರೆಯವರಿಗಿಂತ ಮೊದಲು ನಾವೇ ಅರಿತುಕೊಳ್ಳಬಹುದು ಎಂಬುದು ಇನ್ನೊಂದು ಸಂಗತಿಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

9 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

10 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

10 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

11 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

11 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

12 hours ago