ಆಂಧ್ರಪ್ರದೇಶ: ಕಲಿಯುಗದ ಅಂತ್ಯವನ್ನು ಸೂಚಿಸುವ ಒಂದು ನಂದಿ ವಿಗ್ರಹ ಇದೆ ಅಂದ್ರೆ ನೀವು ನಂಬ್ತೀರಾ.?. ಹೌದು ಇಂತಹ ನಂದಿ ವಿಗ್ರಹ ಆಂಧ್ರಪ್ರದೇಶದ ಯಾಗಂಟಿಯಲ್ಲಿದೆ.
90 ವರ್ಷಗಳ ಹಿಂದೆ ಈ ನಂದಿ ಇರುವ ಜಾಗದಲ್ಲಿ ಸುತ್ತಲೂ ನಾಲ್ಕು ಕಂಬಗಳ ಮಧ್ಯೆ ಜನರು ಪ್ರದಕ್ಷಿಣೆ ಹಾಕುವಷ್ಟು ಜಾಗವಿತ್ತಂತೆ. ಆದ್ರೆ ಈಗ ಪರಿಸ್ಥಿತಿ ಹಾಗಿಲ್ಲ. ಈಗ ಆ ನಂದಿ ವಿಗ್ರಹ ಸುತ್ತಲಿನ ನಾಲ್ಕು ಕಂಬಗಳಿಗೆ ಅಂಟಿಕೊಂಡಿದೆ. ಹೀಗಾಗಿ ಜನರು ಈಗ ನಂದಿ ವಿಗ್ರಹವನ್ನು ಪ್ರದಕ್ಷಿಣೆ ಹಾಕಲು ಸಾಧ್ಯವಿಲ್ಲ.
ಭಾರತೀಯ ಪುರಾತತ್ವ ಇಲಾಖೆ ಈ ಬಗ್ಗೆ ಮಾಡಿರುವ ಸಂಶೋಧನೆಯಿಂದ ಈ ಕಲ್ಲಿನ ವಿಗ್ರಹ ಬೆಳೆಯುತ್ತಿದೆ ಎಂದು ದೃಢೀಕರಿಸಿದೆ. ಒಮ್ಮೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಕಲಿಯುಗ ಅಂತ್ಯವಾಗುತ್ತದೆ ಎಂದು ಪೋತನೂರು ವೀರಬ್ರಹ್ಮೇಂದ್ರರು ತಮ್ಮ ಕಾಲಜ್ಞಾನದಲ್ಲಿ ಹೇಳಿದ್ದಾರೆ. ಈ ಕಲ್ಲು 20 ವರ್ಷಕ್ಕೆ ಒಂದು ಇಂಚಿನಷ್ಟು ಬೆಳೆಯುತ್ತಿದೆ ಎಂದು ದಾಖಲೆ ಸಮೇತ ಪ್ರೂವ್ ಆಗಿದೆ. ಒಮ್ಮೆ ಜನರು ಹೇಳುತ್ತಿರುವಂತೆ, ಕಾಲಜ್ಞಾನದಲ್ಲಿ ಉಲ್ಲೇಖವಾಗಿರುವಂತೆ ಈ ನಂದಿ ವಿಗ್ರಹಕ್ಕೆ ಜೀವ ಬಂದರೆ ಏನು ಗತಿ ಎಂದು ಕೆಲವರು ಚಿಂತಾಕ್ರಾಂತರಾಗಿದ್ದಾರೆ ಎನ್ನಲಾಗಿದೆ.
ಯಾಗಂಟಿ ಸ್ಥಳೀಯ ಜನರು ಈ ದೇವಸ್ಥಾನಕ್ಕೆ ಬಂದಾಗ ಈ ನಂದಿ ವಿಗ್ರಹವನ್ನು ತಪ್ಪದೇ ಸ್ವತಃ ತಮ್ಮ ಕಣ್ಣಿಂದು ನೋಡುತ್ತಾರೆ ಎನ್ನಲಾಗಿದೆ. ಕಾರಣ ಮೊದಲು ತಾವು ನೋಡಬೇಕು ಎನ್ನುವುದು ಒಂದು ಸಂಗತಿಯಾದರೆ, ಮೊದಲು ತಿಳಿದುಕೊಂಡರೆ ಕೆಲವು ಸಂಗತಿಗಳನ್ನು ಬೇರೆಯವರಿಗಿಂತ ಮೊದಲು ನಾವೇ ಅರಿತುಕೊಳ್ಳಬಹುದು ಎಂಬುದು ಇನ್ನೊಂದು ಸಂಗತಿಯಾಗಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…