ರಾಜ್ಯ

ನಂದಿನಿ ತುಪ್ಪ ಕಲಬೆರಕೆ ಪ್ರಕರಣ: ದಂಪತಿ ಬಂಧನ

ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್‌ ಹಾಗೂ ರಮ್ಯಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ನಂದಿನಿ ಪಾರ್ಲರ್‌ಗಳಿಗೆ ಈ ದಂಪತಿ ನಕಲಿ ನಂದಿನಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಘಟಕ ಹೊಂದಿದ್ದ ದಂಪತಿ ರಾಜ್ಯದಲ್ಲಿ ಕಲಬೆರಕೆ ತುಪ್ಪ ತಯಾರಿಸಿ, ಪ್ಯಾಕೇಟ್‌ ಹಾಗೂ ಪ್ಲಾಸ್ಟಿಕ್‌ ಬಾಟಲ್‌ಗಳಲ್ಲಿ ಸರಬರಾಜು ಮಾಡುತ್ತಿದ್ದರು.

ಇದನ್ನು ಓದಿ:ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ  

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶಿವಕುಮಾರ್‌ ಹಾಗೂ ರಮ್ಯಾ ದಂಪತಿಯನ್ನು ಬಂಧಿಸಿದ್ದು, ನಕಲಿ ತುಪ್ಪ ತಯಾರಿಸುವ ದೊಡ್ಡ ಅತ್ಯಾಧುನಿಕ ಯಂತ್ರವನ್ನೂ ವಶಕ್ಕೆ ಪಡೆದಿದ್ದಾರೆ.

ಅಲ್ಲದೇ 150 ಕೋಟಿ ಮೌಲ್ಯದ 8 ಸಾವಿರ ಲೀಟರ್‌ ನಕಲಿ ತುಪ್ಪ ಜಪ್ತಿ ಮಾಡಲಾಗಿದೆ. ಸದ್ಯ ಕಿಂಗ್‌ಪಿನ್‌ ದಂಪತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago