ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್ ಹಾಗೂ ರಮ್ಯಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ನಂದಿನಿ ಪಾರ್ಲರ್ಗಳಿಗೆ ಈ ದಂಪತಿ ನಕಲಿ ನಂದಿನಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಘಟಕ ಹೊಂದಿದ್ದ ದಂಪತಿ ರಾಜ್ಯದಲ್ಲಿ ಕಲಬೆರಕೆ ತುಪ್ಪ ತಯಾರಿಸಿ, ಪ್ಯಾಕೇಟ್ ಹಾಗೂ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಸರಬರಾಜು ಮಾಡುತ್ತಿದ್ದರು.
ಇದನ್ನು ಓದಿ:ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶಿವಕುಮಾರ್ ಹಾಗೂ ರಮ್ಯಾ ದಂಪತಿಯನ್ನು ಬಂಧಿಸಿದ್ದು, ನಕಲಿ ತುಪ್ಪ ತಯಾರಿಸುವ ದೊಡ್ಡ ಅತ್ಯಾಧುನಿಕ ಯಂತ್ರವನ್ನೂ ವಶಕ್ಕೆ ಪಡೆದಿದ್ದಾರೆ.
ಅಲ್ಲದೇ 150 ಕೋಟಿ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪ ಜಪ್ತಿ ಮಾಡಲಾಗಿದೆ. ಸದ್ಯ ಕಿಂಗ್ಪಿನ್ ದಂಪತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…