ರಾಜ್ಯ

ಮತ್ತೆ ನಂದಿನಿ ಹಾಲಿನ ದರ ಏರಿಕೆ…?

ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಬುಧವಾರ ಮಾಹಿತಿ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ‌ ಹೆಚ್ಚಿದೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ.

ಇದನ್ನೂ ಓದಿ:-ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ

ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ. ತುಪ್ಪ ಇವತ್ತು ದರ ಏರಿಕೆ ಮಾಡಲಾಗಿದ್ದು, ಬೇರೆ ಕಂಪನಿಯ ಹಾಲು ಆನ್‌ಲೈನ್‌ ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ನಾವು ರೈತರಿಗೆ ಹಾಲು ಕೂಡಲೇ ಹಣ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ ಉಳಿಸಿಕೊಂಡಿಲ್ಲ ಅನ್ಸುತ್ತೆ ಎಂದು ಡಿಕೆ ಸುರೇಶ್ ಹೇಳಿದರು.

ನಮ್ಮಲ್ಲಿ 95 ಲಕ್ಷದಿಂದ 1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗುತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಆಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರುಪಾಯಿಯನ್ನ ರೈತರಿಗೆ ಕೊಡಲು ಸೂಚಿಸಿದ್ದೇವೆ.

50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆ ಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು ಈಗ ನಾವು ತುಪ್ಪಕ್ಕೆ ನಿಗದಿ ಮಾಡಿರುವ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…

22 mins ago

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೇಂದ್ರ ಸರ್ಕಾರ ಬಂಪರ್‌ ಕೊಡುಗೆ: ಏನದು ಗೊತ್ತಾ.?

ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…

33 mins ago

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

1 hour ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

1 hour ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

2 hours ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

2 hours ago