ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಬುಧವಾರ ಮಾಹಿತಿ ನೀಡಿದ್ದಾರೆ.
ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ.
ಇದನ್ನೂ ಓದಿ:-ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ
ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ. ತುಪ್ಪ ಇವತ್ತು ದರ ಏರಿಕೆ ಮಾಡಲಾಗಿದ್ದು, ಬೇರೆ ಕಂಪನಿಯ ಹಾಲು ಆನ್ಲೈನ್ ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ನಾವು ರೈತರಿಗೆ ಹಾಲು ಕೂಡಲೇ ಹಣ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ ಉಳಿಸಿಕೊಂಡಿಲ್ಲ ಅನ್ಸುತ್ತೆ ಎಂದು ಡಿಕೆ ಸುರೇಶ್ ಹೇಳಿದರು.
ನಮ್ಮಲ್ಲಿ 95 ಲಕ್ಷದಿಂದ 1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗುತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಆಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರುಪಾಯಿಯನ್ನ ರೈತರಿಗೆ ಕೊಡಲು ಸೂಚಿಸಿದ್ದೇವೆ.
50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆ ಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು ಈಗ ನಾವು ತುಪ್ಪಕ್ಕೆ ನಿಗದಿ ಮಾಡಿರುವ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…