ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಲಾಗುತ್ತಿದೆ.
ನಂದಿನಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು ಎಂದು ಬರೆದುಕೊಂಡಿದ್ದಾರೆ.
ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಪೋಸ್ಟ್ ಮಾಡಿದ್ದಾರೆ.
ಕನ್ನಡದಲ್ಲಿ ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ನ ಆಟಗಾರರು ತಮ್ಮ ಲೀಡ್ ಆರ್ಮ್ನಲ್ಲಿ(ತೋಳಿನ ಮುಂಭಾಗ) ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಕರ್ನಾಟಕದ ಹಾಲು ಒಕ್ಕೂಟ್ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿರುವಂತೆ ಲೋಗೋ ಬಿಡುಗಡೆ ಮಾಡಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…