ರಾಜ್ಯ

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

andolanait

Recent Posts

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

26 mins ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

35 mins ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

49 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

50 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

52 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

1 hour ago