ರಾಜ್ಯ

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

andolanait

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

25 mins ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

1 hour ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

6 hours ago