ರಾಜ್ಯ

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago