ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.
ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.
ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ.ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು.
ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ.
ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…