ರಾಜ್ಯ

ನಾರಾಯಣಗೌಡ ಬಂಧನ : ಆಮರಣಾಂತರ ಧರಣಿ ಮಾಡುವುದಾಗಿ ತಾಯಿ ಎಚ್ಚರಿಕೆ

ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ.ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು.

ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ.

ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

7 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

8 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

8 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago