ರಾಜ್ಯ

ನಾರಾಯಣಗೌಡ ಬಂಧನ : ಆಮರಣಾಂತರ ಧರಣಿ ಮಾಡುವುದಾಗಿ ತಾಯಿ ಎಚ್ಚರಿಕೆ

ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ.ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು.

ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ.

ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

2 mins ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

5 mins ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

4 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

4 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

4 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

4 hours ago