ರಾಜ್ಯ

ನಾರಾಯಣಗೌಡ ಬಂಧನ : ಆಮರಣಾಂತರ ಧರಣಿ ಮಾಡುವುದಾಗಿ ತಾಯಿ ಎಚ್ಚರಿಕೆ

ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ.ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು.

ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ.

ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago