ರಾಜ್ಯ

ನಾರಾಯಣಗೌಡ ಬಂಧನ : ಆಮರಣಾಂತರ ಧರಣಿ ಮಾಡುವುದಾಗಿ ತಾಯಿ ಎಚ್ಚರಿಕೆ

ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ.ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು.

ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ.

ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago