ರಾಜ್ಯ

ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿ ನಶೀನ್‌ ಸೈಯದ್‌ ಮಹಮ್ಮದ್‌ ಅಲಿ ಹುಸೈನಿ ನೇಮಕ

ಬೆಂಗಳೂರು: ಕಾಂಗ್ರೆಸ್‌ ಪಾಳಯದಲ್ಲಿ ವಕ್ಫ್‌ ಬೋರ್ಡ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ಏರ್ಪಟ್ಟಿತ್ತು. ಈ ಮಧ್ಯೆಯೇ ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್‌ ಮಹಮ್ಮದ್‌ ಅಲಿ ಹುಸೈನಿ ನೇಮಕವಾಗಿದ್ದಾರೆ.

ಬೆಂಗಳೂರಿನ ಕನ್ನಿಂಗ್‌ ಹ್ಯಾಮ್‌ ರಸ್ತೆಯಲ್ಲಿರುವ ರಾಜ್ಯ ವಕ್ಫ್‌ ಬೋರ್ಡ್‌ ಕಚೇರಿಯಲ್ಲಿ ಇಂದು(ಮಾರ್ಚ್‌.15) ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ನಶೀನ್ ಸೈಯದ್‌ ಮಹಮ್ಮದ್‌ ಅಲಿ ಹುಸೈನಿ ಅವರನ್ನು ಆಯ್ಕೆ ಮಾಡಲಾಗಿದೆ. ಸೈಯದ್‌ ಮಹಮ್ಮದ್‌ ಅಲಿ ಹುಸೈನಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಸಭಾ ಸದಸ್ಯ ನಾಸಿರ್‌ ಹುಸೇನ್‌ ಅವರ ಬೆಂಬಲಿಗರಾಗಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ವಕ್ಫ್‌ ಬೋರ್ಡ್‌ ಅಧ್ಯಕ್ಷ ಹುದ್ದೆಗೆ ಏನಿದು ಜಟಾಪಟಿ?

ವಕ್ಫ್‌ ಬೋರ್ಡ್‌ ಚುನಾವಣೆಗೂ ಮುನ್ನ ಅನ್ವರ್ ಪಾಷಾ ಪರವಾಗಿ ವಕ್ಫ್‌ ಸಚಿವ ಜಮೀರ್ ಅಹಮ್ಮದ್‌ ಖಾನ್‌ ಎರಡೂವರೆ ವರ್ಷಗಳ ಕಾಲ ಅಧಿಕಾರ ಹಂಚಿಕೆ ಸೂತ್ರದಂತೆ ಅಧ್ಯಕ್ಷ ಸ್ಥಾನವನ್ನು ತಮ್ಮ ಬೆಂಬಲಿಗನಿಗೆ ಕೊಡಿಸಿ ಎಂದು ಲಾಬಿ ಮಾಡಿದ್ದರು. ಅಲ್ಲದೇ ಶುಕ್ರವಾರ(ನಿನ್ನೆ) ರಾತ್ರಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿಯೂ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಆದರೆ ಇದಕ್ಕೆಲ್ಲಾ ಕ್ಯಾರೇ ಅನ್ನದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಬೆಂಬಲಿಗನನ್ನೇ ಆಯ್ಕೆ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

10 mins ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

1 hour ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago