ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ಏರ್ಪಟ್ಟಿತ್ತು. ಈ ಮಧ್ಯೆಯೇ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮಹಮ್ಮದ್ ಅಲಿ ಹುಸೈನಿ ನೇಮಕವಾಗಿದ್ದಾರೆ.
ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ಇಂದು(ಮಾರ್ಚ್.15) ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ನಶೀನ್ ಸೈಯದ್ ಮಹಮ್ಮದ್ ಅಲಿ ಹುಸೈನಿ ಅವರನ್ನು ಆಯ್ಕೆ ಮಾಡಲಾಗಿದೆ. ಸೈಯದ್ ಮಹಮ್ಮದ್ ಅಲಿ ಹುಸೈನಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಹುದ್ದೆಗೆ ಏನಿದು ಜಟಾಪಟಿ?
ವಕ್ಫ್ ಬೋರ್ಡ್ ಚುನಾವಣೆಗೂ ಮುನ್ನ ಅನ್ವರ್ ಪಾಷಾ ಪರವಾಗಿ ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಎರಡೂವರೆ ವರ್ಷಗಳ ಕಾಲ ಅಧಿಕಾರ ಹಂಚಿಕೆ ಸೂತ್ರದಂತೆ ಅಧ್ಯಕ್ಷ ಸ್ಥಾನವನ್ನು ತಮ್ಮ ಬೆಂಬಲಿಗನಿಗೆ ಕೊಡಿಸಿ ಎಂದು ಲಾಬಿ ಮಾಡಿದ್ದರು. ಅಲ್ಲದೇ ಶುಕ್ರವಾರ(ನಿನ್ನೆ) ರಾತ್ರಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿಯೂ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಆದರೆ ಇದಕ್ಕೆಲ್ಲಾ ಕ್ಯಾರೇ ಅನ್ನದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಬೆಂಬಲಿಗನನ್ನೇ ಆಯ್ಕೆ ಮಾಡಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…