ರಾಜ್ಯ

ಅಖಿಲ ಭಾರತೀಯ ವಾಕ್‌ ಮತ್ತು ಶ್ರವಣ ಸಂಸ್ಥೆಗೆ ರಾಷ್ಟ್ರೀಯ ಪುರಸ್ಕಾರ: ಪ್ರಶಸ್ತಿ ಸ್ವೀಕರಿಸಿದ ನಿರ್ದೇಶಕಿ ಡಾ.ಪುಷ್ಪಾವತಿ

ನವದೆಹಲಿ: ಮೈಸೂರಿನ ಅಖಿಲ ಭಾರತೀಯ ವಾಕ್‌ ಮತ್ತು ಶ್ರವಣ್‌ ಸಂಸ್ಥೆಗೆ 2024-25ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಐಷ್‌ ನಿರ್ದೇಶಕಿ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.3) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಮೈಸೂರಿನ ಅಖಿಲ ಭಾರತೀಯ ವಾಕ್‌ ಮತ್ತು ಶ್ರವಣ ಸಂಸ್ಥೆಗೆ ಈ ವರ್ಷದ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಸಂಸ್ಥೆ ಹಾಗೂ ವ್ಯಕ್ತಿಗಳಿಗೆ ನೀಡುವ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಐಷ್‌ ಸಂಸ್ಥೆ ಭಾಜನವಾಗಿದೆ. ಹೀಗಾಗಿ ರಾಷ್ಟ್ರಪತಿ ಅವರಿಂದ ಅಖಿಲ ಭಾರತೀಯ ವಾಕ್‌ ಮತ್ತು ಶ್ರವಣ ಸಂಸ್ಥೆಯ ಹಾಲಿ ನಿರ್ದೇಶಕರಾಗಿರುವ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

1 hour ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

1 hour ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

1 hour ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

1 hour ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

1 hour ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

2 hours ago