ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ” ಎಂದು ತಿಳಿಸಿದರು.
ಇದನ್ನು ಓದಿ: ಚೆಕ್ ಬೌನ್ಸ್ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ : ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು
ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ” ಎಂದು ತಿಳಿಸಿದರು.
ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ” ಎಂದು ತಿಳಿಸಿದರು.
ವೈಯಕ್ತಿಕವಾಗಿ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು. ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ತಿಳಿಸಿದರು.
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ…
ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ…
ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…