ರಾಜ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ” ಎಂದು ತಿಳಿಸಿದರು.

ಇದನ್ನು ಓದಿ: ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್‌ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್‌ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್‌ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ” ಎಂದು ತಿಳಿಸಿದರು.

ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ” ಎಂದು ತಿಳಿಸಿದರು.

ವೈಯಕ್ತಿಕವಾಗಿ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು. ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago