ರಾಜ್ಯ

ಜೂನ್‌. 24ರಂದು ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್‌ ಶಾಂತಕುಮಾರ್‌

ಮೈಸೂರು: ದೆಹಲಿ ರೈತ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸುವ ಉದ್ದೇಶದಿಂದ ಇದೇ ಜೂನ್‌. 24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಬೆಳೆವಿಮೆ ನೀತಿ ಬದಲಾಯಿಸಿ ಪ್ರತಿ ರೈತನ ಹೊಲದ ಬೆಳೆ ವಿಮೆ ಜಾರಿ ತರಬೇಕು. ಬರಗಾಲ ಅತಿವೃಷ್ಟಿ, ಮಳೆ ಹಾನಿ, ಪ್ರವಾಹ ಹಾನಿ ಪ್ರಕೃತಿ ವಿಕೋಪದ ಹಾನಿ ಬೆಳೆ ನಷ್ಟ ಪರಿಹಾರದ ಎನ್‌ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಬೇಕು. ಎಂದು ಒತ್ತಾಯಿಸುವ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ. ಇದನ್ನು ಗಮನಿಸಿ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದ ರೈತರ ಹಿತವನ್ನ ರಕ್ಷಿಸಬೇಕು ಎಂದು ಕುರುಬೂರ್ ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಓಟಿಎಸ್ ಸಾಲ ಮೇಳ ನಡೆಸಿ ಹೊಸ ಸಾಲ ವಿತರಿಸಬೇಕು ಎಂದು ಸರ್ಕಾರ ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಆದೇಶ ನೀಡಿದೆ. ಎಸ್ಎಲ್‌ಬಿಸಿ ಕೂಡ ಮೆಗಾ ಅದಾಲತ್ ನಡೆಸಲು ಸೂಚಿಸಿದೆ ಈ ಬಗ್ಗೆ ಬ್ಯಾಂಕಿನವರು ಕಾರ್ಯಕ್ರಮ ನಡೆಸದಿದ್ದರೆ ಬ್ಯಾಂಕ್ ಮುಂದೆ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದಲೇ ಕಬ್ಬು ಅರೆಯುವ ಅನುಮತಿ ಪತ್ರ ನೀಡುವ ಮೊದಲೇ ಡಿಜಿಟಲೀಕರಣ ಜಾರಿ ಮಾಡಲಿ. ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದು ರೈತರಿಗೆ ವ್ಯವಸ್ಥಿತ ವಂಚನೆ ನಡೆಸಲು ಸಹಕಾರ ನೀಡಬಾರದು. ಕಳಪೆ ರಸಗೊಬ್ಬರ ಕೀಟನಾಶಕ ಬಿತ್ತಲೆ ಬೀಜ ಮಾರಾಟ ಮಾಡುವ ಮಾರಾಟಗಾರರಿಗೆ ಜಾಮೀನು ರಹಿತ ಬಂಧನ ಮಾಡುವ ಕಠಿಣ ಕಾನೂನು ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಇದರಿಂದ ರೈತರಿಗೆ ಮೋಸವಾಗುವುದು ತಪ್ಪುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಜಿಲ್ಲಾ ಉಪಾಧ್ಯಕ್ಷ ಮಾರ್ಬಳಿ ನೀಲಕಂಠಪ್ಪ, ಬರಡನಪುರ ನಾಗರಾಜ್. ತಾಲೂಕು ಅಧ್ಯಕ್ಷ ವೆಂಕಟೇಶ್, ನಂಜನಗೂಡು ತಾಲೂಕು ಅಧ್ಯಕ್ಷ ವಿಜಯೇಂದ್ರ, ತಿ.ನರಸೀಪುರ ತಾಲೂಕು ಸಂಘಟನಾ ಕಾರ್ಯದರ್ಶಿ ಪ್ರದೀಪ್, ಮಹದೇವ ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

8 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago