ರಾಜ್ಯ

ಮೈಸೂರಿಗೆ ಬಂದಿದ್ದ ಮೋದಿ ಆತಿಥ್ಯದ ವೆಚ್ಚ ನೀಡದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ: ಈಶ್ವರ ಖಂಡ್ರೆ

ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು(ಮೇ.25) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ಯೋಜನೆ ಕಾರ್ಯಕ್ರಮ ನಡೆದಾಗ, ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದರು.

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6 ಕೋಟಿ 33 ಲಕ್ಷ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ತಿಳಿಸಿದರು. ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

13 mins ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

29 mins ago

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

2 hours ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

2 hours ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

3 hours ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

3 hours ago