ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು(ಮೇ.25) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ಯೋಜನೆ ಕಾರ್ಯಕ್ರಮ ನಡೆದಾಗ, ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.
ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದರು.
ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6 ಕೋಟಿ 33 ಲಕ್ಷ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ತಿಳಿಸಿದರು. ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಸಚಿವರು ಹೇಳಿದರು.
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…