ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು(ಮೇ.25) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ಯೋಜನೆ ಕಾರ್ಯಕ್ರಮ ನಡೆದಾಗ, ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.
ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದರು.
ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6 ಕೋಟಿ 33 ಲಕ್ಷ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ತಿಳಿಸಿದರು. ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಸಚಿವರು ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…