ರಾಜ್ಯ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ

ಬೆಂಗಳೂರು: ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ಅ.9) ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ತಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಖಂಡ್ರೆ ಹೇಳಿದರು.

ಮಹದಾಯಿ ನದಿಯ ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರ್ಕಾರ ತಕರಾರು ಮಾಡುತ್ತದೆ. ಆದರೆ, 2018ರ ಆಗಸ್ಟ್ 14ರಂದು ಮಹಾದಾಯಿ ನದಿ ನೀರು ವಿವಾದ ನ್ಯಾಯಾಧಿಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರೀಯ ಜಲ ಆಯೋಗ 2022ರ ಡಿಸೆಂಬರ್ 29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯದೊಂದಿಗೆ ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ನಿನ್ನೆಯ ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ಈಶ್ವರ ಖಂಡ್ರೆ ತಿಳಿಸದರು.

ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದೂ ಎಂದೂ ಖಂಡ್ರೆ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

39 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago