ರಾಜ್ಯ

ನವರಾತ್ರಿ ಜನಪದ ರಂಗೋತ್ಸವ ಯಶಸ್ವಿಯಾಗಲಿ : ಸಚಿವ ಶಿವರಾಜ್ ಎಸ್ ತಂಗಡಗಿ

ಮೈಸೂರು:  ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು.

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣಕ್ಕೆ 35 ವರ್ಷಗಳ ಸುದೀರ್ಘ ಇತಿಹಾಸವಿದ್ದು, ಅಳಿವಿನಂಚಿನ ಜನಪದ ಕಲಾಪ್ರಕಾರಗಳಿಗೆ ದಸರೆಯಲ್ಲಿ ರಂಗಾಯಣವೂ ಸಾಕ್ಷಿಯಾಗಲಿದೆ ಎಂದರು.

ಜನಪದ ಕಲೆಗಳಿಂದ ಎಲ್ಲಾ ಕಲೆಗಳು ಹುಟ್ಟಿದ್ದು, ರಂಗಾಯಣವು ಇನ್ನೂ ಎತ್ತರದ ಮಟ್ಟಕ್ಕೆ ಬೆಳೆದು ಹೊಸ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಡಲಿದೆ ಎಂದು ಹೇಳಿದರು.

ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಮಾತನಾಡಿ, ಕರ್ನಾಟಕದ ಸುವರ್ಣ ಸಂಭ್ರಮದ 50 ವರ್ಷದ ಕಾಲಘಟ್ಟದಲ್ಲಿ ಈ ವರ್ಷದ ನವರಾತ್ರಿ ಉತ್ಸವವನ್ನು 9 ದಿನಗಳ ಕಾಲ ಜನಪದ ರಂಗ ಉತ್ಸವವಾಗಿ ರೂಪಿಸಲಾಗಿದೆ. ರಂಗಯಾಣವು ಪ್ರತೀ ವರ್ಷ ಎಲ್ಲಾ ನಾಟಕಗಳನ್ನು ಸೇರಿದಂತೆ ಆಧುನಿಕ ನಾಟಕಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಈ ಬಾರಿ ವಿಷೇಶವಾಗಿ ಕರ್ನಾಟಕದ ಎಲ್ಲಾ ಭಾಗಗಳಿಗೆ ಪ್ರಾತಿನಿತ್ಯ ಹಾಗೂ ಅಳಿವಿನಂಚಿನಲ್ಲಿರುವ ಎಲ್ಲಾ ಜನಪದ ಕಲೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದರು.

ರಂಗ ಉತ್ಸವದಲ್ಲಿ ಈ ಬಾರಿಯ ವಿಶೇಷ ಕಾರ್ಯಕ್ರಮಗಳು
ದೊಡ್ಡಾಟ, ಶ್ರೀಕೃಷ್ಣಪಾರಿಜಾತ, ಸಂಗ್ಯಾಬಾಳ್ಯದಂತಹ ಸಣ್ಣಾಟ, ಮೂಡಲಪಾಯ ಯಕ್ಷಗಾನ ಪ್ರದರ್ಶನ, ತೊಗಲು ಬೊಂಬೆಯಾಟ, ನೀಲಗಾರರ ಮೇಳ (ಮಂಟೇಸ್ವಾಮಿ ಕುರಿತು ಗೀತೆಗಳ ಪ್ರಸ್ತುತಿ ಕಾರ್ಯಕ್ರಮ), ಕರಾವಳಿ ಯಕ್ಷಗಾನ ಮೊದಲಾದ ಕಾರ್ಯಕ್ರಮಗಳನ್ನು 9 ದಿನಗಳವರೆಗೆ ನಡೆಸಲಾಗುವುದು.

ಈ ಸಂದರ್ಭದಲ್ಲಿ ರಂಗಭೂಮಿಯ ಸಾಧಕ ಮೈಸೂರು ಗುರುರಾಜ್ ಅವರಿಗೆ ‘ರಂಗ ಗೌರವ ಪುರಸ್ಕಾರ’ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಕೆ. ಧರಣಿದೇವಿ ಮಾಲಗತ್ತಿ, ಜನಪದ ವಿದ್ವಾಂಸರಾದ ಪಿ.ಕೆ ರಾಜಶೇಖರ್, ರಂಗ ಸಮಾಜದ ಸದಸ್ಯರಾದ ರಾಜಪ್ಪ ದಳವಾಯಿ , ಸುರೇಶ್ ಬಾಬು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎನ್ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

1 hour ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

1 hour ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

3 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

3 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

3 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

5 hours ago