ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು.
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣಕ್ಕೆ 35 ವರ್ಷಗಳ ಸುದೀರ್ಘ ಇತಿಹಾಸವಿದ್ದು, ಅಳಿವಿನಂಚಿನ ಜನಪದ ಕಲಾಪ್ರಕಾರಗಳಿಗೆ ದಸರೆಯಲ್ಲಿ ರಂಗಾಯಣವೂ ಸಾಕ್ಷಿಯಾಗಲಿದೆ ಎಂದರು.
ಜನಪದ ಕಲೆಗಳಿಂದ ಎಲ್ಲಾ ಕಲೆಗಳು ಹುಟ್ಟಿದ್ದು, ರಂಗಾಯಣವು ಇನ್ನೂ ಎತ್ತರದ ಮಟ್ಟಕ್ಕೆ ಬೆಳೆದು ಹೊಸ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಡಲಿದೆ ಎಂದು ಹೇಳಿದರು.
ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಮಾತನಾಡಿ, ಕರ್ನಾಟಕದ ಸುವರ್ಣ ಸಂಭ್ರಮದ 50 ವರ್ಷದ ಕಾಲಘಟ್ಟದಲ್ಲಿ ಈ ವರ್ಷದ ನವರಾತ್ರಿ ಉತ್ಸವವನ್ನು 9 ದಿನಗಳ ಕಾಲ ಜನಪದ ರಂಗ ಉತ್ಸವವಾಗಿ ರೂಪಿಸಲಾಗಿದೆ. ರಂಗಯಾಣವು ಪ್ರತೀ ವರ್ಷ ಎಲ್ಲಾ ನಾಟಕಗಳನ್ನು ಸೇರಿದಂತೆ ಆಧುನಿಕ ನಾಟಕಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಈ ಬಾರಿ ವಿಷೇಶವಾಗಿ ಕರ್ನಾಟಕದ ಎಲ್ಲಾ ಭಾಗಗಳಿಗೆ ಪ್ರಾತಿನಿತ್ಯ ಹಾಗೂ ಅಳಿವಿನಂಚಿನಲ್ಲಿರುವ ಎಲ್ಲಾ ಜನಪದ ಕಲೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದರು.
ರಂಗ ಉತ್ಸವದಲ್ಲಿ ಈ ಬಾರಿಯ ವಿಶೇಷ ಕಾರ್ಯಕ್ರಮಗಳು
ದೊಡ್ಡಾಟ, ಶ್ರೀಕೃಷ್ಣಪಾರಿಜಾತ, ಸಂಗ್ಯಾಬಾಳ್ಯದಂತಹ ಸಣ್ಣಾಟ, ಮೂಡಲಪಾಯ ಯಕ್ಷಗಾನ ಪ್ರದರ್ಶನ, ತೊಗಲು ಬೊಂಬೆಯಾಟ, ನೀಲಗಾರರ ಮೇಳ (ಮಂಟೇಸ್ವಾಮಿ ಕುರಿತು ಗೀತೆಗಳ ಪ್ರಸ್ತುತಿ ಕಾರ್ಯಕ್ರಮ), ಕರಾವಳಿ ಯಕ್ಷಗಾನ ಮೊದಲಾದ ಕಾರ್ಯಕ್ರಮಗಳನ್ನು 9 ದಿನಗಳವರೆಗೆ ನಡೆಸಲಾಗುವುದು.
ಈ ಸಂದರ್ಭದಲ್ಲಿ ರಂಗಭೂಮಿಯ ಸಾಧಕ ಮೈಸೂರು ಗುರುರಾಜ್ ಅವರಿಗೆ ‘ರಂಗ ಗೌರವ ಪುರಸ್ಕಾರ’ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಕೆ. ಧರಣಿದೇವಿ ಮಾಲಗತ್ತಿ, ಜನಪದ ವಿದ್ವಾಂಸರಾದ ಪಿ.ಕೆ ರಾಜಶೇಖರ್, ರಂಗ ಸಮಾಜದ ಸದಸ್ಯರಾದ ರಾಜಪ್ಪ ದಳವಾಯಿ , ಸುರೇಶ್ ಬಾಬು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎನ್ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…