ರಾಜ್ಯ

ನವರಾತ್ರಿ ಜನಪದ ರಂಗೋತ್ಸವ ಯಶಸ್ವಿಯಾಗಲಿ : ಸಚಿವ ಶಿವರಾಜ್ ಎಸ್ ತಂಗಡಗಿ

ಮೈಸೂರು:  ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು.

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣಕ್ಕೆ 35 ವರ್ಷಗಳ ಸುದೀರ್ಘ ಇತಿಹಾಸವಿದ್ದು, ಅಳಿವಿನಂಚಿನ ಜನಪದ ಕಲಾಪ್ರಕಾರಗಳಿಗೆ ದಸರೆಯಲ್ಲಿ ರಂಗಾಯಣವೂ ಸಾಕ್ಷಿಯಾಗಲಿದೆ ಎಂದರು.

ಜನಪದ ಕಲೆಗಳಿಂದ ಎಲ್ಲಾ ಕಲೆಗಳು ಹುಟ್ಟಿದ್ದು, ರಂಗಾಯಣವು ಇನ್ನೂ ಎತ್ತರದ ಮಟ್ಟಕ್ಕೆ ಬೆಳೆದು ಹೊಸ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಡಲಿದೆ ಎಂದು ಹೇಳಿದರು.

ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಮಾತನಾಡಿ, ಕರ್ನಾಟಕದ ಸುವರ್ಣ ಸಂಭ್ರಮದ 50 ವರ್ಷದ ಕಾಲಘಟ್ಟದಲ್ಲಿ ಈ ವರ್ಷದ ನವರಾತ್ರಿ ಉತ್ಸವವನ್ನು 9 ದಿನಗಳ ಕಾಲ ಜನಪದ ರಂಗ ಉತ್ಸವವಾಗಿ ರೂಪಿಸಲಾಗಿದೆ. ರಂಗಯಾಣವು ಪ್ರತೀ ವರ್ಷ ಎಲ್ಲಾ ನಾಟಕಗಳನ್ನು ಸೇರಿದಂತೆ ಆಧುನಿಕ ನಾಟಕಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಈ ಬಾರಿ ವಿಷೇಶವಾಗಿ ಕರ್ನಾಟಕದ ಎಲ್ಲಾ ಭಾಗಗಳಿಗೆ ಪ್ರಾತಿನಿತ್ಯ ಹಾಗೂ ಅಳಿವಿನಂಚಿನಲ್ಲಿರುವ ಎಲ್ಲಾ ಜನಪದ ಕಲೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದರು.

ರಂಗ ಉತ್ಸವದಲ್ಲಿ ಈ ಬಾರಿಯ ವಿಶೇಷ ಕಾರ್ಯಕ್ರಮಗಳು
ದೊಡ್ಡಾಟ, ಶ್ರೀಕೃಷ್ಣಪಾರಿಜಾತ, ಸಂಗ್ಯಾಬಾಳ್ಯದಂತಹ ಸಣ್ಣಾಟ, ಮೂಡಲಪಾಯ ಯಕ್ಷಗಾನ ಪ್ರದರ್ಶನ, ತೊಗಲು ಬೊಂಬೆಯಾಟ, ನೀಲಗಾರರ ಮೇಳ (ಮಂಟೇಸ್ವಾಮಿ ಕುರಿತು ಗೀತೆಗಳ ಪ್ರಸ್ತುತಿ ಕಾರ್ಯಕ್ರಮ), ಕರಾವಳಿ ಯಕ್ಷಗಾನ ಮೊದಲಾದ ಕಾರ್ಯಕ್ರಮಗಳನ್ನು 9 ದಿನಗಳವರೆಗೆ ನಡೆಸಲಾಗುವುದು.

ಈ ಸಂದರ್ಭದಲ್ಲಿ ರಂಗಭೂಮಿಯ ಸಾಧಕ ಮೈಸೂರು ಗುರುರಾಜ್ ಅವರಿಗೆ ‘ರಂಗ ಗೌರವ ಪುರಸ್ಕಾರ’ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಕೆ. ಧರಣಿದೇವಿ ಮಾಲಗತ್ತಿ, ಜನಪದ ವಿದ್ವಾಂಸರಾದ ಪಿ.ಕೆ ರಾಜಶೇಖರ್, ರಂಗ ಸಮಾಜದ ಸದಸ್ಯರಾದ ರಾಜಪ್ಪ ದಳವಾಯಿ , ಸುರೇಶ್ ಬಾಬು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎನ್ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

7 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago