ರಾಜ್ಯ

ನಕ್ಸಲರ ಪ್ರಕರಣ ಇತ್ಯರ್ಥಕ್ಕೆ ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಆರು ಮಂದಿ ನಕ್ಸಲರು ಶರಣಾಗಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಶರಣಾಗಿದ್ದಾರೆ.

ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

7 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

8 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

8 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

8 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

9 hours ago