ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಆರು ಮಂದಿ ನಕ್ಸಲರು ಶರಣಾಗಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಶರಣಾಗಿದ್ದಾರೆ.
ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…