nikhil kumaraswamy siddaramaiah
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ವಿಚಾರ ಕುರಿತು ಸ್ಪಷ್ಟನೆ ನೀಡಿದರು.
ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆ ಆಗಬೇಕು. ಹಾದಿಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರ ಅಲ್ಲ. ಲೋಕಸಭೆ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಅತ್ಯಂತ ಗೌರವದಿಂದ ನೋಡಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಎರಡನೇ ಪ್ರಶ್ನೆ ಇಲ್ಲ. ಈ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿಯಾಗಿರಲಿ ಜೆಡಿಎಸ್ ಆಗಿರಲಿ ಯಾರೂ ಕೂಡ ಹೊರಗೆ ಬಂದು ಮಾತನಾಡಬಾರದು ಎಂದು ಹೇಳಿದರು.
ಇನ್ನು ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಹೇಳಿದ ಅವರು, ನಾವು ಮೈತ್ರಿ ಧರ್ಮವನ್ನು ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…
ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…