nikhil kumaraswamy siddaramaiah
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ವಿಚಾರ ಕುರಿತು ಸ್ಪಷ್ಟನೆ ನೀಡಿದರು.
ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆ ಆಗಬೇಕು. ಹಾದಿಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರ ಅಲ್ಲ. ಲೋಕಸಭೆ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಅತ್ಯಂತ ಗೌರವದಿಂದ ನೋಡಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಎರಡನೇ ಪ್ರಶ್ನೆ ಇಲ್ಲ. ಈ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿಯಾಗಿರಲಿ ಜೆಡಿಎಸ್ ಆಗಿರಲಿ ಯಾರೂ ಕೂಡ ಹೊರಗೆ ಬಂದು ಮಾತನಾಡಬಾರದು ಎಂದು ಹೇಳಿದರು.
ಇನ್ನು ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಹೇಳಿದ ಅವರು, ನಾವು ಮೈತ್ರಿ ಧರ್ಮವನ್ನು ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…