ರಾಜ್ಯ

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಬಿಜೆಪಿಯಲ್ಲಿ ಜೆಡಿಎಸ್ ವಿಲೀನ ಆದರೆ ಒಳ್ಳೆಯದು ಎಂದು ಡಿಸಿಎಂ ಡಿಕೆಶಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.

ನಮ್ಮ ಪಕ್ಷದ ಕಥೆ ಇರಲಿ. ಬಿಹಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಬಂದು ನಿಂತಿದೆ? ಎಷ್ಟು ಡಿಜಿಟ್’ಗೆ ಬಂದು ನಿಂತಿದೆ. ಬಿಹಾರ ಅಷ್ಟೇ ಅಲ್ಲ, ಇನ್ನೂ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಎಷ್ಟೆಷ್ಟು ಸ್ಥಾನ ಕಳಿಸಿದೆ? ಅದರ ಮತ ಗಳಿಕೆಯಷ್ಟು? ಅಲ್ಲಿ ಡಿಕೆಶಿ ಅವರು ತಮ್ಮ ಪಕ್ಷವನ್ನು ಯಾವ ಪಕ್ಷದಲ್ಲಿ ವಿಲೀನ ಮಾಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ. ಜೆಡಿಎಸ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಗೆದ್ದಿದೆ. ಅದೇ ಬಿಹಾರ, ಮಹಾರಾಷ್ಟ್ರ, ದೆಹಲಿ ಮುಂತಾದ ರಾಜ್ಯಗಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ? ಮೊದಲು ರಾಷ್ಟ್ರೀಯ ಪಕ್ಷ ಎನ್ನುವ ಬೋರ್ಡ್ ತೆಗೆದುಹಾಕಿ ಬೇರೆ ಹಾಕಿಕೊಳ್ಳಿ ಎಂದು ಉಪ ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು; ನಾನು ರಾಜಕಾರಣ ಮಾಡೋದಕ್ಕೆ ಬಂದಿರೋದು. ವಿಧಾನಸೌಧಕ್ಕೆ ಹೋಗೋದಕ್ಕೆ ನಾನು ರಾಜಕಾರಣಕ್ಕೆ ಬಂದಿದ್ದೇನೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ ಎಂದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿದರು.

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ 37% ಮತ ಪಾಲು (ವೋಟ್ ಶೇರ್) ಹೊಂದಿದೆ. ಅದೇ ರೀತಿ ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ನಮ್ಮ ಬಲಿಷ್ಟವಾಗಿದೆ. ಎಷ್ಟು ಪರ್ಸೆಂಟ್ ವೋಟು ಪಡೆದಿದ್ದೇವೆ ಎನ್ನುವುದನ್ನು ಅಂಕಿಅಂಶಗಳು ಹೇಳುತ್ತವೆ. ಇನ್ನು ಕಿತ್ತೂರು ಕರ್ನಾಟಕ, ಕರಾವಳಿ ಭಾಗದಲ್ಲಿಯೂ ನಮ್ಮ ಪಕ್ಷವಿದೆ. ಜೆಡಿಎಸ್ ರಾಜ್ಯದ ಉದ್ದಗಲಕ್ಕೂ ಇರುವ ಪ್ರಾದೇಶಿಕ ಪಕ್ಷ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು ನಿಖಿಲ್ ಕುಮಾರಸ್ವಾಮಿ ಅವರು.

ಸವದತ್ತಿಯಲ್ಲಿ 30,000 ವೋಟ್‌ ಪಡೆದು ಪಕ್ಷ ಗಟ್ಟಿಯಾಗಿದೆ. ಅದೇ ರೀತಿ ಸೇಡಂ, ರಾಯಭಾಗ, ಶೃಂಗೇರಿ ಸೇರಿ ಅನೇಕ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಪಡೆದಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿರುವ ಕೆಲ ವ್ಯಕ್ತಿಗಳು ಜೆಡಿಎಸ್ ಶಕ್ತಿಯನ್ನು ಪ್ರಶ್ನೆ ಮಾಡಬಹುದು. ನಮ್ಮ ಪಕ್ಷದ ಶಕ್ತಿ ಏನು ಎಂಬುದನ್ನು ಕಳೆದ ನಾಲ್ಕು ವಿಧಾನಸಭೆ ಚುನಾವಣೆಗಳಲ್ಲಿ ರಾಜ್ಯದ ಜನ ತೋರಿಸಿದ್ದಾರೆ. 55 ಲಕ್ಷ ಜನರು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ವಿಲೀನ ಮಾಡಿ ಎಂದ ಡಿಕೆಶಿ ಟಾಂಗ್ ಕೊಟ್ಟರು ನಿಖಿಲ್ ಅವರು.

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಹಜ ಮೈತ್ರಿ ಏರ್ಪಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಒಗ್ಗಟ್ಟಿನ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಯ ಬಲ ತಿಳಿಯಲಿದೆ ನಮ್ಮ ಹಾಗೂ ಬಿಜೆಪಿಯ ಮೈತ್ರಿ ಸ್ವಾಭಾವಿಕ, ಹಾಗೂ ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಆಗಿರುವ ಮೈತ್ರಿ ಇದು ಎಂದು ನಿಖಿಲ್ ಅವರು ಒತ್ತಿ ಹೇಳಿದರು.

ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರಿಗೆ ಬಲ ತುಂಬಬೇಕಿದೆ. ಅದಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಎಲ್ಲಾ ಪಕ್ಷಗಳಿಗೂ ತಮ್ಮ ಸ್ವಂತ ಬಲ ಇರಲೇಬೇಕು. ಅದಕ್ಕೆ ಅವಕಾಶ ಕೊಡಬೇಕು. ರಾಷ್ಟ್ರ ಮಟ್ಟದ ಹಾಗೂ ಸ್ಥಳೀಯ ರಾಜಕಾರಣಕ್ಕೂ ವ್ಯತ್ಯಾಸ ಇರುತ್ತದೆ. ನಮ್ಮ ಮೈತ್ರಿ ನಿರ್ಧಾರಗಳನ್ನು ರಾಷ್ಟ್ರೀಯ ನಾಯಕರು ಅಂತಿಮವಾಗಿ ತೆಗೆದುಕೊಳ್ಳುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ ಎಂಬ ಡಿಕೆಶಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದರಿಂದ ಯಾರಿಗೆ ಅನುಕೂಲ ಆಗಲಿದೆ ಶಿವಕುಮಾರ್ ಅವರೇ? ನಮ್ಮ ಪಕ್ಷದ ಶಕ್ತಿ ಏನು ಎಂಬುದರ ಅರಿವು ಡಿಕೆಶಿ ಅವರಿಗಿದೆ ಎಂದು ಭಾವಿಸಿದ್ದೇನೆ. ಅಷ್ಟು ಲಘುವಾಗಿ ಮಾತನಾಡುವ ಅಗತ್ಯವಿಲ್ಲ. ಮೊದಲು ಅವರ ಪಾರ್ಟಿ ಹೆಸರು ಬದಲಾಯಿಸಿಕೊಳ್ಳಲಿ ಎಂದು ಕಟುವಾಗಿ ಟೀಕಿಸಿದರು.

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ:
ನಮ್ಮದು ರಾಜಕಾರಣದ ಹಿನ್ನೆಲೆಯ ಕುಟುಂಬ ಇರಬಹುದು. ನಾನು ರಾಜಕಾರಣ ಮಾಡಬೇಕು ಎಂದೇ ಬಂದಿದ್ದೇನೆ. ಹಾಗೆಯೇ ವಿಧಾನಸೌಧಕ್ಕೆ ಪ್ರವೇಶ ಮಾಡಬೇಕು ಎಂದೇ ಬಂದಿದ್ದೇನೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಅವರು; ಯಾವ ಕ್ಷೇತ್ರದಿಂದ ಎಂಬುದನ್ನು ನಿಧಾನವಾಗಿ ತಿಳಿಸುವೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಬಳ್ಳಾರಿ ಶಾಸಕನನ್ನು ಒದ್ದು ಒಳಕ್ಕೆ ಹಾಕಬೇಕಿತ್ತು
ಸಣ್ಣ ಕಾರಣಕ್ಕೆ ಶುರುವಾದ ಬಳ್ಳಾರಿ ಗಲಾಟೆ ಗುಂಡು ಹಾರಿಸಿ ಕೊಲೆಯವರೆಗೂ ಹೋಗಿದೆ. ಆದರೆ, ಅಲ್ಲಿನ ಶಾಸಕ ಜನಾರ್ದನ ರೆಡ್ಡಿ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ಗಮನಿಸಿದೆ. ಈ ಸರ್ಕಾರ ದ್ವೇಷ ಭಾಷಣ ತಡೆಗೆ ಮಸೂದೆ ಒಂದನ್ನು ಅಂಗೀಕಾರ ಮಾಡಿದೆ. ಇಲ್ಲಿ ದ್ವೇಷ ಭಾಷಣ ಅನ್ವಯ ಆಗಲ್ಲವಾ? ಈ ಸರ್ಕಾರಕ್ಕೆ ಬಳ್ಳಾರಿಯ ಶಾಸಕ ಮಾತನಾಡಿದ ಮಾತುಗಳು ಕೇಳಿಸಲಿಲ್ಲವೇ? ಇದು ಆ ಮಸೂದೆ ವ್ಯಾಪ್ತಿಗೆ ಬರೋದಿಲ್ವೇ? ಅವರಿಗೆ ರಕ್ಷಣೆ ಕೊಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹೇಗೆ ಹೇಳುತ್ತಾರೆ ಎಂದು ನಿಕೋಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿ ನಮ್ಮ ಪಕ್ಷ ಜನಾರ್ದನ ರೆಡ್ಡಿ ಅವರ ನೆರವಿಗೆ ಧಾವಿಸಿದ್ದರು, ಹಿಂದೆ ಅವರು ಕುಮಾರಸ್ವಾಮಿ ಅವರು ವಿರುದ್ಧ ಇದ್ದರು ಎಂಬುದಕ್ಕೆ ಸಂಬಂಧವಿಲ್ಲ. ರೆಡ್ಡಿ ಅವರಷ್ಟೇ ಅಲ್ಲ, ಅವರ ಜಾಗದಲ್ಲಿ ಯಾರೇ ಇದ್ದರೂ ನಮ್ಮ ಪಕ್ಷ ಸ್ಪಂದಿಸುತ್ತಿತ್ತು. ಕಾಂಗ್ರೆಸ್ ಪಕ್ಷಕ್ಕೆ ಬೇರೆ ಕೆಲಸ ಇಲ್ಲವಷ್ಟೇ. ನಾಚಿಕೆ ಬಿಟ್ಟು ತಪ್ಪಿತಸ್ಥರನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ ಎಂದು ಅವರು ಕಿಡಿಕಾರಿದರು.

ಮೃತ ಕಾರ್ಯಕರ್ತನ ಮನೆಗೆ ಸಾಂತ್ವನ ಹೇಳಲು ಹೋದವರು ₹25 ಲಕ್ಷ ಕೊಡುವ ಅವಕಾಶ ಯಾವ ಕಾನೂನಿನಲ್ಲಿ ಇದೆಯೇ? ಇವರಿಗೆ ಕಾನೂನು ಅನ್ವಯ ಆಗುವುದಿಲ್ಲವೇ? ಗೃಹ ಸಚಿವರೇ ಈ ಎಲ್ಲಾ ಅಂಶಗಳ ಬಗ್ಗೆ ಏನಂತಿರಾ? ಇದಕ್ಕೆಲ್ಲಾ ಉಪ ಮುಖ್ಯಮಂತ್ರಿಗಳು ಉತ್ತರ ಕೊಡಬೇಕಲ್ವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹರಿಹಾಯ್ದರು.

ಬೆಂಗಳೂರಲ್ಲಿ ಪ್ರತಿ ಚದರ ಅಡಿಗೆ ಹಣ‌ ಫಿಕ್ಸ್
ಬೆಂಗಳೂರಲ್ಲಿ ಪ್ರತಿ ಚದರ ಅಡಿಗೆ ಹಣ‌ ಫಿಕ್ಸ್ ಆಗಿದೆ. ನಮ್ಮ ಬೆಂಗಳೂರಲ್ಲಿ ಫುಟ್ ಪಾತ್ ಯಾವುದು ರಸ್ತೆ ಯಾವುದು ಎಂಬುದು ಗೊತ್ತಿಲ್ಲ. ಪ್ರತಿನಿತ್ಯ ರಸ್ತೆಯ ಮೂಲಕ ಕೆಲಸಕ್ಕೆ ಹೋಗಬೇಕಾದರೆ ಒಂದೂವರೆ, ಎರಡು ಗಂಟೆ ಸಮಯ ಬೇಕು. ಮೂಲಭೂತ ಸೌಕರ್ಯ ಕಳಪೆಯಾಗಿದೆ. ಕೇಳಿದರೆ ಕೇಳಿದವರ ಮೇಲೆಯೇ ವಾಗ್ದಾಳಿ ಮಾಡುತ್ತಾರೆ. ಯಾಕೆ ರಸ್ತೆ ಗುಂಡಿ ಮುಚ್ಚಿಲ್ಲ? ಇದೆಲ್ಲಾ ನೋಡಿಕೊಂಡೇ ಬೇರೆ ರಾಜ್ಯಗಳಿಗೆ ದೊಡ್ಡ ದೊಡ್ಡ ಕಂಪನಿಗಳು ಶಿಫ್ಟ್ ಆಗ್ತಿವೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಆವರು ಹೇಳಿದರು.

ಬ್ಲಾಕ್ ಬಕ್ ಸಂಸ್ಥೆ ಸಿಇಒ ಅಸಹಾಯಕತೆ ಹೇಳಿಕೊಂಡರು. ನಾವು ಬೇರೆ ರಾಜ್ಯಗಳನ್ನ ಆಯ್ಕೆ ಮಾಡ್ಕೋತೇವೆ. ಗೂಗಲ್ ಅವರು ವೈಜಾಗ್’ಗೆ ಹೋಗಿದ್ದು ಯಾಕೆ? ಅವರಿಗೆ ಬೇಸಿಕ್ ಇನ್ಫ್ರಾಸ್ಟ್ರಕ್ಚರ್ ಕೊಟ್ಟಿದ್ರೆ ಹೋಗ್ತಿದ್ರಾ?ನನಗೆ ಇನ್ನೂ ಸದನದ ಒಳಗೆ ?ಮಾತನಾಡುವ ಅವಕಾಶ ಸಿಕ್ಕಿಲ್ಲ. ಆದರೆ ಸದನದ ಹೊರಗಡೆ ಮಾತನಾಡಲಿಕ್ಕೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಿಖಿಲ್ ಗುಡುಗಿದರು.

ಫೆಬ್ರವರಿ 1ರಿಂದ ರಾಜ್ಯಾದ್ಯಂತ ಪ್ರವಾಸ ಮಾಡ್ತೀನಿ
ಜನರೊಂದಿಗೆ ಜನತಾದಳ ಪ್ರವಾಸ ಮಾಡಿರುವ ಎಲ್ಲಾ ಜಿಲ್ಲೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಫೆಬ್ರವರಿ 1ರಿಂದ ಮತ್ತೆ 2ನೇ ಹಂತದಲ್ಲಿ ಜನರೊಂದಿಗೆ ಜನತಾದಳ ಪ್ರವಾಸ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು ಎಂದು ಹೇಳಿದರು.

ಹಾಸನ ಸಮಾವೇಶಕ್ಕೆ ಜಿ.ಟಿ. ದೇವೇಗೌಡರನ್ನು ಕರೆಯುತ್ತೀರಾ ಎನ್ನುವ ಪ್ರಶ್ನೆಗೆ, ಈ ಬಗ್ಗೆ ಪಕ್ಷದ ವರಿಷ್ಠ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಉಪಾಧ್ಯಕ್ಷರಾದ ಮೋಹನ್ , ಪ್ರಧಾನ ಕಾರ್ಯದರ್ಶಿಗಳಾ ಶಿವಕುಮಾರ್ ಬೆಳ್ಳಿತಟ್ಟೆ ಅವರು. ಯಾಸಿನ್ ನಾಸಿರ್ ಸೇರಿದಂತೆ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

4 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

5 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

12 hours ago