ರಾಜ್ಯ

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ: ಸಚಿವ ಕೆ.ಜೆ.ಜಾರ್ಜ್

ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು.

ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, “ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ ಉತ್ಪಾದನಾ ಘಟಕಗಳನ್ನು ಸನ್ನದ್ಧವಾಗಿ ಇಡಬೇಕು”, ಎಂದು ನಿರ್ದೇಶನ ನೀಡಿದರು.

“ರಾಯಚೂರು, ಯರಮರಸ್ ಮತ್ತು ಬ್ಳಾರಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕೆಲವು ಉತ್ಪಾದನಾ ಘಟಕಗಳು ಸ್ಥಗಿತಗೊಂಡಿರುವ ಕುರಿತು ಮಾಹಿತಿ ಪಡೆದ ಸಚಿವರು, ಕಾಲಮಿತಿ ಹಾಕಿಕೊಂಡು ಸ್ಥಾವರಗಳ ವಾರ್ಷಿಕ ನಿರ್ವಹಣೆ ಅಥವಾ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಘಕಗಳನ್ನು (ಆರ್ ಟಿಪಿಎಸ್ ನ ಒಂದು ಘಟಕ ಹೊರತುಪಡಿಸಿ) ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಿದ್ಧಗೊಳಿಸಬೇಕು”, ಎಂದು ಸೂಚಿಸಿದರು.

ವಿದ್ಯುತ್ ವಿನಿಮಯಕ್ಕೆ ಒತ್ತು:
ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಬದಲು ವಿದ್ಯುತ್ ವಿನಿಮಯಕ್ಕೆ ಆದ್ಯತೆ ನೀಡಬೇಕು. ಈ ಬಗ್ಗೆ ಈಗಿನಿಂದಲೇ ಅನ್ಯ ರಾಜ್ಯಗಳೊಂದಿಗೆ ಒಪ್ಪಂದಕ್ಕೆ ಮಾತುಕತೆ ನಡೆಸಬೇಕು. ಅದೇ ರೀತಿ ಅಲ್ಪಾವಧಿ ವಿದ್ಯುತ್ ಖರೀದಿ ದುಬಾರಿಯಾಗಿರುವುದರಿಂದ ಕಡಿಮೆ ದರಕ್ಕೆ ದೀರ್ಘಾವಧಿ ವಿದ್ಯುತ್ ಖರೀದಿಗೆ ಒತ್ತು ನೀಡಬೇಕು. ಹಾಗೆ ಮಾಡಿದಲ್ಲಿ ಹೆಚ್ಚುವರಿ ವಿದ್ಯುತ್ ಅನ್ನು ಪೀಕ್ ಅವರ್ ನಲ್ಲಿ ಹೆಚ್ಚು ದರಕ್ಕೆ ಮಾರಾಟ ಮಾಡಿ ಹೊರೆ ಕಡಿಮೆ ಮಾಡಬೇಕು ಎಂದು ಸೂಚನ ನೀಡಿದರು.

“ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಹಗಲು ವೇಳೆಯೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಬೇಕು. ಉಷ್ಣ ವಿದ್ಯುತ್ ಮತ್ತು ಜಲ ವಿದ್ಯುತ್ ಸ್ಥಾವರಗಳಲ್ಲಿ ಸಾಧ್ಯವಾದಷ್ಟು ರಾತ್ರಿ ವೇಳೆಯ ಬಳಕೆಗೆ ವಿದ್ಯುತ್ ಉತ್ಪಾದಿಸಬೇಕು. ಆ ಮೂಲಕ ಬೇಡಿಕೆ ಮತ್ತು ಪೂರೈಕೆಯ ನಡುವೆ ಅಂತವಿಲ್ಲದಂತೆ ಎಚ್ಚರಿಕೆ ವಹಿಸಬೇಕು” ಎಂದರು.

ಇಂಧನ ಇಲಾಖೆ ಸರ್ಕಾರದ ಅಪರ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಕೆಪಿಸಿಎಲ್ ನಿರ್ದೇಶಕ (ಹಣಕಾಸು) ಆರ್.ನಾಗರಾಜ್, ನಿರ್ದೇಶಕ (ತಾಂತ್ರಿಕ) ಎಸ್.ಕೃಷ್ಣಮೂರ್ತಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago