ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಪ್ರಮಾಣವನ್ನು ಏರಿಸಲು ಬಯಸಿರುವ ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಭೂಮಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಗುರುವಾರ ತಮ್ಮನ್ನು ಭೇಟಿಯಾದ ಕಂಪನಿಯ ಸಿಇಒ ಅರವಿಂದ್ ಮಣಿ ಮತ್ತು ಉಪಾಧ್ಯಕ್ಷೆ ಮಯೂರಿ ಮೋಹಿಡೇಕರ್ ಜತೆ ಅವರು ಭವಿಷ್ಯದ ಸಂಪರ್ಕ ವ್ಯವಸ್ಥೆ ಕುರಿತು ಮಾತುಕತೆ ನಡೆಸಿದರು.
ಸದ್ಯಕ್ಕೆ ರಿವರ್ ಮೊಬಿಲಿಟಿ ಕಂಪನಿಯು ಹೊಸಕೋಟೆ ಬಳಿ ಇರುವ ತನ್ನ ಉತ್ಪಾದನಾ ಘಟಕದಲ್ಲಿ ವರ್ಷಕ್ಕೆ 1.20 ಲಕ್ಷ ಇ.ವಿ. ದ್ವಿಚಕ್ರ ವಾಹನಗಳನ್ನು ತಯಾರಿಸುತ್ತಿದೆ. ಇದನ್ನು ವರ್ಷಕ್ಕೆ 5 ಲಕ್ಷಕ್ಕೆ ಕೊಂಡೊಯ್ಯಲು ಕಂಪನಿ ಬಯಸಿದ್ದು, ಅದಕ್ಕಾಗಿ ಜಮೀನಿಗೆ ಬೇಡಿಕೆ ಇಟ್ಟಿದೆ. ಗೌರಿಬಿದನೂರು, ಕೋಲಾರದ ನರಸಾಪುರ, ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಭೂಮಿ ತೋರಿಸಿದ್ದು, ಬಯಸಿದ ಪ್ರಕಾರ ಜಮೀನು ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕಂಪನಿಯು ಇ.ವಿ. ಬ್ಯಾಟರಿಯನ್ನು ಕೂಡ ಇಲ್ಲೇ ತಯಾರಿಸುತ್ತಿದ್ದು, 400 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಕಂಪನಿಯ ಇ.ವಿ. ವಾಹನವು ಒಂದು ಸಲ ಚಾರ್ಜ್ ಮಾಡಿದರೆ 120 ಕಿ.ಮೀ. ಓಡಲಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಇ.ವಿ. ಕ್ಷೇತ್ರದಲ್ಲಿ ಹೂಡಿಕೆಗೆ ಯಥೇಚ್ಛ ಅವಕಾಶಗಳಿವೆ. ಜತೆಗೆ ಸರಕಾರ ಕೂಡ ನಾನಾ ಬಗೆಯ ಉತ್ತೇಜನವನ್ನು ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಸಾಂಪ್ರದಾಯಿಕ ವಾಹನಗಳು ಜನಪ್ರಿಯವಾಗಲಿವೆ ಎಂದು ಅವರು ನುಡಿದರು.
ಇದೇ ಸಂದರ್ಭದಲ್ಲಿ ಅವರು ಕಂಪನಿಯು ತಯಾರಿಸುವ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಒಂದು ಸುತ್ತು ಚಲಾಯಿಸಿ, ಅದರ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಇದ್ದರು.
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ…
ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ…
ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.…
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…