ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಪ್ರಮಾಣವನ್ನು ಏರಿಸಲು ಬಯಸಿರುವ ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಭೂಮಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಗುರುವಾರ ತಮ್ಮನ್ನು ಭೇಟಿಯಾದ ಕಂಪನಿಯ ಸಿಇಒ ಅರವಿಂದ್ ಮಣಿ ಮತ್ತು ಉಪಾಧ್ಯಕ್ಷೆ ಮಯೂರಿ ಮೋಹಿಡೇಕರ್ ಜತೆ ಅವರು ಭವಿಷ್ಯದ ಸಂಪರ್ಕ ವ್ಯವಸ್ಥೆ ಕುರಿತು ಮಾತುಕತೆ ನಡೆಸಿದರು.
ಸದ್ಯಕ್ಕೆ ರಿವರ್ ಮೊಬಿಲಿಟಿ ಕಂಪನಿಯು ಹೊಸಕೋಟೆ ಬಳಿ ಇರುವ ತನ್ನ ಉತ್ಪಾದನಾ ಘಟಕದಲ್ಲಿ ವರ್ಷಕ್ಕೆ 1.20 ಲಕ್ಷ ಇ.ವಿ. ದ್ವಿಚಕ್ರ ವಾಹನಗಳನ್ನು ತಯಾರಿಸುತ್ತಿದೆ. ಇದನ್ನು ವರ್ಷಕ್ಕೆ 5 ಲಕ್ಷಕ್ಕೆ ಕೊಂಡೊಯ್ಯಲು ಕಂಪನಿ ಬಯಸಿದ್ದು, ಅದಕ್ಕಾಗಿ ಜಮೀನಿಗೆ ಬೇಡಿಕೆ ಇಟ್ಟಿದೆ. ಗೌರಿಬಿದನೂರು, ಕೋಲಾರದ ನರಸಾಪುರ, ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಭೂಮಿ ತೋರಿಸಿದ್ದು, ಬಯಸಿದ ಪ್ರಕಾರ ಜಮೀನು ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕಂಪನಿಯು ಇ.ವಿ. ಬ್ಯಾಟರಿಯನ್ನು ಕೂಡ ಇಲ್ಲೇ ತಯಾರಿಸುತ್ತಿದ್ದು, 400 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಕಂಪನಿಯ ಇ.ವಿ. ವಾಹನವು ಒಂದು ಸಲ ಚಾರ್ಜ್ ಮಾಡಿದರೆ 120 ಕಿ.ಮೀ. ಓಡಲಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಇ.ವಿ. ಕ್ಷೇತ್ರದಲ್ಲಿ ಹೂಡಿಕೆಗೆ ಯಥೇಚ್ಛ ಅವಕಾಶಗಳಿವೆ. ಜತೆಗೆ ಸರಕಾರ ಕೂಡ ನಾನಾ ಬಗೆಯ ಉತ್ತೇಜನವನ್ನು ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಸಾಂಪ್ರದಾಯಿಕ ವಾಹನಗಳು ಜನಪ್ರಿಯವಾಗಲಿವೆ ಎಂದು ಅವರು ನುಡಿದರು.
ಇದೇ ಸಂದರ್ಭದಲ್ಲಿ ಅವರು ಕಂಪನಿಯು ತಯಾರಿಸುವ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಒಂದು ಸುತ್ತು ಚಲಾಯಿಸಿ, ಅದರ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಇದ್ದರು.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…