ರಾಜ್ಯ

ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಜಮೀನು ಮಂಜೂರು: ಎಂ‌.ಬಿ ಪಾಟೀಲ್‌

ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಪ್ರಮಾಣವನ್ನು ಏರಿಸಲು ಬಯಸಿರುವ ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಭೂಮಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ.

ಗುರುವಾರ ತಮ್ಮನ್ನು ಭೇಟಿಯಾದ ಕಂಪನಿಯ ಸಿಇಒ ಅರವಿಂದ್ ಮಣಿ ಮತ್ತು ಉಪಾಧ್ಯಕ್ಷೆ ಮಯೂರಿ ಮೋಹಿಡೇಕರ್ ಜತೆ ಅವರು ಭವಿಷ್ಯದ ಸಂಪರ್ಕ ವ್ಯವಸ್ಥೆ ಕುರಿತು ಮಾತುಕತೆ ನಡೆಸಿದರು.

ಸದ್ಯಕ್ಕೆ ರಿವರ್ ಮೊಬಿಲಿಟಿ ಕಂಪನಿಯು ಹೊಸಕೋಟೆ ಬಳಿ ಇರುವ ತನ್ನ ಉತ್ಪಾದನಾ ಘಟಕದಲ್ಲಿ ವರ್ಷಕ್ಕೆ 1.20 ಲಕ್ಷ ಇ.ವಿ. ದ್ವಿಚಕ್ರ ವಾಹನಗಳನ್ನು ತಯಾರಿಸುತ್ತಿದೆ. ಇದನ್ನು ವರ್ಷಕ್ಕೆ 5 ಲಕ್ಷಕ್ಕೆ ಕೊಂಡೊಯ್ಯಲು ಕಂಪನಿ ಬಯಸಿದ್ದು, ಅದಕ್ಕಾಗಿ ಜಮೀನಿಗೆ ಬೇಡಿಕೆ ಇಟ್ಟಿದೆ. ಗೌರಿಬಿದನೂರು, ಕೋಲಾರದ ನರಸಾಪುರ, ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಭೂಮಿ ತೋರಿಸಿದ್ದು, ಬಯಸಿದ ಪ್ರಕಾರ ಜಮೀನು ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕಂಪನಿಯು ಇ.ವಿ.‌ ಬ್ಯಾಟರಿಯನ್ನು ಕೂಡ ಇಲ್ಲೇ ತಯಾರಿಸುತ್ತಿದ್ದು, 400 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಕಂಪನಿಯ ಇ.ವಿ. ವಾಹನವು ಒಂದು ಸಲ ಚಾರ್ಜ್ ಮಾಡಿದರೆ 120 ಕಿ.ಮೀ. ಓಡಲಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಇ.ವಿ. ಕ್ಷೇತ್ರದಲ್ಲಿ ಹೂಡಿಕೆಗೆ ಯಥೇಚ್ಛ ಅವಕಾಶಗಳಿವೆ. ಜತೆಗೆ ಸರಕಾರ ಕೂಡ ನಾನಾ ಬಗೆಯ ಉತ್ತೇಜನವನ್ನು ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಸಾಂಪ್ರದಾಯಿಕ ವಾಹನಗಳು ಜನಪ್ರಿಯವಾಗಲಿವೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಅವರು ಕಂಪನಿಯು ತಯಾರಿಸುವ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಒಂದು ಸುತ್ತು ಚಲಾಯಿಸಿ, ಅದರ ಬಗ್ಗೆ ಮಾಹಿತಿ ಪಡೆದುಕೊಂಡರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago