ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ ಪ್ರಮಾಣವನ್ನು ಏರಿಸಲು ಬಯಸಿರುವ ರಿವರ್ ಮೊಬಿಲಿಟಿ ಕಂಪನಿಗೆ ಅಗತ್ಯ ಭೂಮಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಗುರುವಾರ ತಮ್ಮನ್ನು ಭೇಟಿಯಾದ ಕಂಪನಿಯ ಸಿಇಒ ಅರವಿಂದ್ ಮಣಿ ಮತ್ತು ಉಪಾಧ್ಯಕ್ಷೆ ಮಯೂರಿ ಮೋಹಿಡೇಕರ್ ಜತೆ ಅವರು ಭವಿಷ್ಯದ ಸಂಪರ್ಕ ವ್ಯವಸ್ಥೆ ಕುರಿತು ಮಾತುಕತೆ ನಡೆಸಿದರು.
ಸದ್ಯಕ್ಕೆ ರಿವರ್ ಮೊಬಿಲಿಟಿ ಕಂಪನಿಯು ಹೊಸಕೋಟೆ ಬಳಿ ಇರುವ ತನ್ನ ಉತ್ಪಾದನಾ ಘಟಕದಲ್ಲಿ ವರ್ಷಕ್ಕೆ 1.20 ಲಕ್ಷ ಇ.ವಿ. ದ್ವಿಚಕ್ರ ವಾಹನಗಳನ್ನು ತಯಾರಿಸುತ್ತಿದೆ. ಇದನ್ನು ವರ್ಷಕ್ಕೆ 5 ಲಕ್ಷಕ್ಕೆ ಕೊಂಡೊಯ್ಯಲು ಕಂಪನಿ ಬಯಸಿದ್ದು, ಅದಕ್ಕಾಗಿ ಜಮೀನಿಗೆ ಬೇಡಿಕೆ ಇಟ್ಟಿದೆ. ಗೌರಿಬಿದನೂರು, ಕೋಲಾರದ ನರಸಾಪುರ, ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಭೂಮಿ ತೋರಿಸಿದ್ದು, ಬಯಸಿದ ಪ್ರಕಾರ ಜಮೀನು ಹಂಚಿಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕಂಪನಿಯು ಇ.ವಿ. ಬ್ಯಾಟರಿಯನ್ನು ಕೂಡ ಇಲ್ಲೇ ತಯಾರಿಸುತ್ತಿದ್ದು, 400 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಕಂಪನಿಯ ಇ.ವಿ. ವಾಹನವು ಒಂದು ಸಲ ಚಾರ್ಜ್ ಮಾಡಿದರೆ 120 ಕಿ.ಮೀ. ಓಡಲಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಇ.ವಿ. ಕ್ಷೇತ್ರದಲ್ಲಿ ಹೂಡಿಕೆಗೆ ಯಥೇಚ್ಛ ಅವಕಾಶಗಳಿವೆ. ಜತೆಗೆ ಸರಕಾರ ಕೂಡ ನಾನಾ ಬಗೆಯ ಉತ್ತೇಜನವನ್ನು ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಸಾಂಪ್ರದಾಯಿಕ ವಾಹನಗಳು ಜನಪ್ರಿಯವಾಗಲಿವೆ ಎಂದು ಅವರು ನುಡಿದರು.
ಇದೇ ಸಂದರ್ಭದಲ್ಲಿ ಅವರು ಕಂಪನಿಯು ತಯಾರಿಸುವ ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು ಒಂದು ಸುತ್ತು ಚಲಾಯಿಸಿ, ಅದರ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಇದ್ದರು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…