ರಾಜ್ಯ

ನೀಟ್‌ | ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ ಸೀಟು ಹಂಚಿಕೆ

ಬೆಂಗಳೂರು : ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ಮಂಜೂರು ಮಾಡಿದೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ.ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಅನುಮತಿ ನೀಡಿದ್ದು, ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ 9,663ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಸತತದ ಪ್ರಯತ್ನದ ಫಲವಾಗಿ ಬಹುವರ್ಷಗಳ ನಂತರ ರಾಜ್ಯಕ್ಕೆ ಇಷ್ಟು ದೊಡ್ಡ ಮೊತ್ತದ ವೈದ್ಯಕೀಯ ಸೀಟುಗಳು ಲಭ್ಯವಾಗಿವೆ. ರಾಜ್ಯ ಸರ್ಕಾರ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಹೆಚ್ಚುವರಿ ಸೀಟುಗಳಿಗಾಗಿ ಮನವಿ ಮಾಡಿತ್ತು. ಆದರೆ ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಎನ್‍ಎಂಸಿ ವಿನಂತಿಯನ್ನು ತಿರಸ್ಕರಿಸಿತ್ತು.

ರಾಷ್ಟ್ರೀಯ ವೈದ್ಯಕೀಯ ಆಯೋಗ ಮಂಜೂರು ಮಾಡಿರುವ ಸೀಟುಗಳಲ್ಲಿ ಸರ್ಕಾರದ ಅಧೀನದಲ್ಲಿರುವ 8 ವೈದ್ಯಕೀಯ ಕಾಲೇಜುಗಳಿಗೆ ತಲಾ 50 ಹೆಚ್ಚುವರಿ ಸೀಟುಗಳು ಹಾಗೂ ಒಂದು ಡೀಮ್ಡ್ ವಿಶ್ವವಿದ್ಯಾನಿಲಯಕ್ಕೆ ಮಂಜೂರು ಮಾಡಲಾಗಿದೆ.

ಹೆಚ್ಚುವರಿ ಸೀಟುಗಳನ್ನು ಪಡೆಯುವ ಕಾಲೇಜುಗಳಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಮತ್ತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿವೆ.

ಇದೇ ವೇಳೆ ಪ್ರವೇಶ ಹೆಚ್ಚಳಕ್ಕೆ ಅರ್ಜಿ ಸಲ್ಲಿಸಿದ್ದ ಏಳು ಕಾಲೇಜುಗಳಾದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಅನುಮೋದನೆ ದೊರೆತಿಲ್ಲ.ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ, ರಾಮನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಕನಕಪು- ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದಲ್ಲಿ ತಲಾ 100 ಸೀಟುಗಳ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತು. ತಲಾ 50 ಸೀಟುಗಳನ್ನು ಅನುಮೋದಿಸಿದೆ. ಹುಬ್ಬಳ್ಳಿಯ ಜೆಜಿಎಂಎಂ ಕಾಲೇಜಿಗೂ (ಡೀಮ್ಡ್) 50 ಸೀಟು ಹೆಚ್ಚಿಸಲಾಗಿದೆ.ರಾಮನಗರ ಮತ್ತು ಕನಕಪುರದಲ್ಲಿ ಸ್ಥಾಪಿಸಲಾಗಿರುವ ಎರಡು ವೈದ್ಯಕೀಯ ಕಾಲೇಜುಗಳಿಗೆ 250 ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಜೊತೆಗೆ ಹುಬ್ಬಳ್ಳಿ ಜೆಎಂಎಂಎಂಸಿ , ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜುಗಳು ತಮಗೂ 50 ವೈದ್ಯಕೀಯ ಸೀಟುಗಳನ್ನ ನೀಡಬೇಕೆಂಬ ಪ್ರಸ್ತಾವನೆಗೆ ಎನ್‍ಎಂಸಿ ಅನುಮೋದನೆ ನೀಡಿಲ್ಲ.

ಆದರೆ ಈ ಸೀಟುಗಳು ಹೊಸ ಆಯ್ಕೆ ಪ್ರವೇಶಕ್ಕೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಏಇಂ) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೆಇಎ ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 12 ರಂದು ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ತನ್ನ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಪೂರ್ಣಗೊಳಿಸಲು ಕಾಯುತ್ತಿದೆ.ದೇಶಾದ್ಯಂತ ಪ್ರಸಕ್ತ ವರ್ಷ 8000 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಎನ್‍ಎಂಸಿಯ ಅಧ್ಯಕ್ಷ ಅಭಿಜಿತ್ ಚಂದ್ರಕಾಂತ್ ಸೇಠ್ ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago