ಮೈಸೂರು: ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೆಲವು ಅಭ್ಯರ್ಥಿಗಳಿಗೆ ರ್ಯಾಂಕ್ ನೀಡುವುದರಲ್ಲಿ ತಾರತಮ್ಯವಾಗಿದೆ. ಅಭ್ಯಸ ಮಾಡಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಿ, ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ಅವರು ಇಂದು(ಜೂ.15) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು (ಎನ್.ಟಿ.ಎ) ನೀಟ್ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಉತ್ತೀರ್ಣ ಮಾಡುವುದು ಎಷ್ಟು ಸರಿ? ಗ್ರೇಸ್ ಮಾರ್ಕ್ಸ್ ನೀಡುವುದು ಕೆಟ್ಟ ಅಭ್ಯಾಸ ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಇಲ್ಲಿಯ ಜನರಿಗೆ ತಿಳಿದಿದೆ. ಈ ಬಾರಿ ಉತ್ತರ ಭಾರತದಲ್ಲಿಯೂ ಬಿಜೆಪಿಗೆ ಹಿನ್ನಡೆಯಾಗಿದೆ. ಬಿಜೆಪಿಯ ಅಹಂಕಾರಕ್ಕೆ ಜನರು ತಕ್ಕ ಪಾಠ ಕಲಿಸಿರುವುದಾಗಿ ಆರ್.ಎಸ್.ಎಸ್ ನ ಮುಖ್ಯಸ್ಥರೇ ಹೇಳಿದ್ದಾರೆ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…