ರಾಜ್ಯ

ಮೇ 4 ರಂದು NEET : ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳು, 1.49 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು : ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು.

ಬೆಳಿಗ್ಗೆ 11.00 ಗಂಟೆಯಿಂದ NTA ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ/ ದೊಡ್ಡ ಬಟನ್ ಗಳಿರುವ ಶರ್ಟ್ /ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲ್ಗೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ.

ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.

ಮಧ್ಯಾಹ್ನ 2.00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಆಯಾ ಜಿಲ್ಲಾಡಳಿತದ ವತಿಯಿಂದ ಮಾಡಲಾಗಿರುತ್ತದೆ.

NTA ವತಿಯಿಂದ Frisking ಮತ್ತು JAMMER ಅಳವಡಿಸಲು, ಏಜೆನ್ಸಿರವರನ್ನು ನಿಯೋಜಿಸಿದ್ದು, ಪರೀಕ್ಷಾ ಕೇಂದ್ರಕ್ಕೆ, JAMMER ಅಳವಡಿಕೆ ಮತ್ತು Frisking ಮಾಡುತ್ತಿರುವ ಬಗ್ಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ತನ್ನ ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 min ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

48 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago