ರಾಜ್ಯ

ಮೇ 4 ರಂದು NEET : ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳು, 1.49 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು : ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು.

ಬೆಳಿಗ್ಗೆ 11.00 ಗಂಟೆಯಿಂದ NTA ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ/ ದೊಡ್ಡ ಬಟನ್ ಗಳಿರುವ ಶರ್ಟ್ /ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲ್ಗೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ.

ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.

ಮಧ್ಯಾಹ್ನ 2.00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಆಯಾ ಜಿಲ್ಲಾಡಳಿತದ ವತಿಯಿಂದ ಮಾಡಲಾಗಿರುತ್ತದೆ.

NTA ವತಿಯಿಂದ Frisking ಮತ್ತು JAMMER ಅಳವಡಿಸಲು, ಏಜೆನ್ಸಿರವರನ್ನು ನಿಯೋಜಿಸಿದ್ದು, ಪರೀಕ್ಷಾ ಕೇಂದ್ರಕ್ಕೆ, JAMMER ಅಳವಡಿಕೆ ಮತ್ತು Frisking ಮಾಡುತ್ತಿರುವ ಬಗ್ಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ತನ್ನ ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 hour ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 hour ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

6 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

6 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

6 hours ago