ರಾಜ್ಯ

NEET: ಕೆಇಎಯಿಂದ ಸೀಟ್‌ ಹಂಚಿಕೆ; ದಲ್ಲಾಳಿಗಳ ಮೋಸಕ್ಕೆ ಬಲಿಯಾಗದಂತೆ ಮನವಿ

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು.

ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.

ನೀಟ್‌ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ.

ಹೇಗಾದರೂ ಮಾಡಿ ಒಳ್ಳೆ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ. ಅವರ ಮೋಸದ ಜಾಲಕ್ಕೆ ಬೀಳಬೇಡಿ ಎಂದು ಸಚಿವರು ಸಲಹೆ ನೀಡಿದ್ದಾರೆ.

ಕೆಇಎಯಿಂದ ಸೀಟು ಹಂಚಿಕೆ: ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ. ಅದರಂತೆ ನಿಯಮಗಳನ್ನು ಪಾಲಿಸಿ. ವಿದ್ಯಾರ್ಥಿಗಳು ಮತ್ತು ಪೋಷಕರು ಇದನ್ನು ತಪ್ಪದೇ ತಿಳಿದುಕೊಳ್ಳಬೇಕು ಎಂದು ಸಚಿವರು ವಿವರಿಸಿದ್ದಾರೆ.

ಅತ್ಯುತ್ತಮ ಸಾಧನೆ ಮಾಡಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ, ಎಲ್ಲ ವಿದ್ಯಾರ್ಥಿಗಳ ಭವಿಷ್ಯವೂ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ದಲ್ಲಾಳಿಗಳಿಗೆ ಎಚ್ಚರಿಕೆ: ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರನ್ನು ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂಥ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago