ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ದೇಶದಾದ್ಯಂತ ಒಂದೇ ಹಂತದಲ್ಲಿ ನಡೆಯುತ್ತದೆ.
ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಕನಸು ನನಸಾಗಿಸಲು ಈ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಲೀಕ್, ಅಕ್ರಮ ಮತ್ತು ಅನ್ಯಾಯದ ಆರೋಪಗಳು ಹೆಚ್ಚಾಗಿದ್ದವು.
ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮತ್ತು ಅಸಮಾಧಾನ ಹೆಚ್ಚಾಗಿತ್ತು. ಈ ಬಾರಿ ಅಂತಹ ಕಹಿ ಘಟನೆಗಳು ಪುನರಾವರ್ತನೆಯಾಗದಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಸಕಲ ಎಚ್ಚರಿಕೆ ವಹಿಸಿದೆ. ಈ ಬಾರಿ ಎನ್ಟಿಎ ಜೀರೋ ಲೀಕ್ ಪಾಲಿಸಿ ಅನ್ನು ಜಾರಿಗೊಳಿಸಿದೆ.
ಪ್ರಶ್ನೆಪತ್ರಿಕೆಗಳನ್ನು ಮುದ್ರಣದಿಂದ ಪರೀಕ್ಷಾ ಕೇಂದ್ರಗಳವರೆಗೆ ಜಿಪಿಎಸ್ ಟ್ರ್ಯಾಕಿಂಗ್ನೊಂದಿಗೆ ಪೊಲೀಸ್ ಎಸ್ಕಾರ್ಟ್ನಲ್ಲಿ ಸಾಗಿಸಲಾಗುತ್ತಿದೆ. ಡಬಲ್ ಲಾಕ್ ಸ್ಟ್ರಾಂಗ್ರೂಮ್ಗಳಲ್ಲಿ 24 ಗಂಟೆ ಸಿಸಿಟಿವಿ ನಿಗಾ ಇರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವೆರಿಫಿಕೇಷನ್ ಮತ್ತು ಫೇಷಿಯಲ್ ರೆಕಗ್ನಿಷನ್ ಮತ್ತು ಫಿಂಗರ್ಪ್ರಿಂಟ್, ಹಾಗೂ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾಗಳು, ೫ಜಿ ಜ್ಯಾಮರ್ಗಳು, ಡಿಜಿಟಲ್ ಫ್ರಿಸ್ಕಿಂಗ್ ಮತ್ತು ಲೈವ್ ಮಾನಿಟರಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಮೂಲ ಗುರುತಿನ ಚೀಟಿ ಜೊತೆಗೆ ತರಬೇಕು. ಮೊಬೈಲ್ ಫೋನ್ ಕ್ಯಾಲ್ಕುಲೇಟರ್, ವಾಚ್, ನೀರು ಬಾಟಲ್ ಸೇರಿದಂತೆ ಹಲವು ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು. ಎಲ್ಲಾ ಕೇಂದ್ರಗಳಲ್ಲಿ ತೀವ್ರ ಫ್ರಿಸ್ಕಿಂಗ್ ನಡೆಯಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಲೀಕ್ ಸುದ್ದಿಗಳನ್ನು ನಂಬದಂತೆ ಎನ್ಟಿಎ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…